CrimeDistricts

ಶಾಸಕರ ಹೆಸರು ಬರೆದಿಟ್ಟು ಸರ್ಕಾರಿ ನೌಕರ ಆತ್ಮಹತ್ಯೆ

ಚಿತ್ರದುರ್ಗ; ಸರ್ಕಾರಿ ನೌಕರನೊಬ್ಬ ಬಿಜೆಪಿ ಶಾಸಕರೊಬ್ಬರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಇಂತಹ ಆರೋಪ ಕೇಳಿಬಂದಿದೆ.

ಹೊಳಲ್ಕೆರೆ ತಾಲ್ಲೂಕಿನ ಉಪ್ಪರಿಗೇನಹಳ್ಳಿ ಗ್ರಾಪಂ ಕ್ಲರ್ಕ್‌ ತಿಪ್ಪೇಸ್ವಾಮಿ ಆತ್ಮಹತ್ಯೆ ಮಾಡಿಕೊಂಡವರು. ಅಕ್ರಮವಾಗಿ ಖಾತೆ ಮಾಡಿಕೊಡುವಂತೆ ಶಾಸಕ ಚಂದ್ರಪ್ಪ, ತಾಪಂ ಇಒ ಸೇರಿ ಹಲವರು ನನ್ನ ಮೇಲೆ ಒತ್ತಡ ಹೇರಿದ್ದರು. ಪದೇ ಪದೇ ಕರೆ ಮಾಡಿ ನನಗೆ ಕಿರುಕುಳ ಕೊಡುತ್ತಿದ್ದರು ಎಂದು ತಿಪ್ಪೇಸ್ವಾಮಿ ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದಾರೆ.

ಹೊಸದುರ್ಗದ ಜಾನಕಲ್‌ ಎಂಬಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಬಂಧಿಕ ಮನೆಗೆ ಬಂದಿದ್ದ ತಿಪ್ಪೇಸ್ವಾಮಿ ಅಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Share Post