Districts

ಜಿ.ಟಿ.ದೇವೇಗೌಡ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಭೇಟಿ

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಬೆಳಿಗ್ಗೆ ಭೇಟಿ ನೀಡಿದ್ದರು. ಜಿ.ಟಿ.ದೇವೇಗೌಡ ಅವರ ಮೊಮ್ಮಗಳು ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಅವರು ಜಿಟಿಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ ಸಿಂಹ, ಶಾಸಕರಾದ ನಿರಂಜನ್, ಮಹೇಶ್ ಹಾಜರಿದ್ದರು.

ಜಿ.ಟಿ.ದೇವೇಗೌಡರು ಬಿಜೆಪಿ ಸೇರುತ್ತಾರೆ ಎಂಬ ಮಾತುಗಳು ಕೆಲದಿನಗಳಿಂದ ಕೇಳಿಬರುತ್ತಿವೆ. ನಳಿನ್‌ ಕುಮಾರ್‌ ಕಟೀಲ್‌ ಅವರು ಸಾಂತ್ವನ ಹೇಳಲು ಬಂದಿದ್ದರೂ ಇದ್ರಲ್ಲಿ ರಾಜಕೀಯ ಉದ್ದೇಶ ಇರಬಹುದು ಎಂಬ ಮಾತುಗಳು ಸಾಮಾನ್ಯವಾಗಿ ಕೇಳಿಬಂದಿದ್ದವು. ಆದ್ರೆ ಈ ಬಗ್ಗೆ ಮಾತನಾಡಿರುವ ಜಿ.ಟಿ.ದೇವೇಗೌಡರು, ನಾನು ಯಾರೊಂದಿಗೂ ರಾಜಕಾರಣ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನನ್ನ ಮೊಮ್ಮಗಳು ಬಹಳ ಚೂಟಿಯಾಗಿದ್ದಳು. ಅವಳಿಗೆ ಕ್ಯಾನ್ಸರ್ ಬಂದಿತ್ತು. ಆದರೇ ಏಳು ತಿಂಗಳಲ್ಲಿ ಕ್ಯಾನ್ಸರ್ ಗೆದಿದ್ದಳು. ವೈದ್ಯರು ಕೂಡ ಕ್ಯಾನ್ಸರ್ ಮುಕ್ತ ಎಂದು ಹೇಳಿ ಸಂತೋಷಪಟ್ಟಿದ್ದರು. ಆದರೆ ಅವಳಿಗೆ ದಿಢೀರನೆ ಸಾವು ಬಂತು. ಗೌರಿ ಸಾವಿನ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಮುಖಂಡರು ಸಾಂತ್ವನ ಹೇಳಿದ್ದಾರೆ. ಆದ್ರೆ ಈ ವೇಳೆ ಯಾವ ಪಕ್ಷದವರ ಜತೆಗೂ ನಾನು ರಾಜಕಾರಣ ಮಾತನಾಡಿಲ್ಲ ಎಂದು ಹೇಳಿದರು.

Share Post