DistrictsPolitics

ಗುಜರಾತ್‌ ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಬೀರಲ್ಲ; ಸಿದ್ದರಾಮಯ್ಯ

ಮೈಸೂರು; ಗುಜರಾತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗಳಿಸುವ ಬಗ್ಗೆ ನಮಗೆ ನಿರೀಕ್ಷೆ ಇರಲಿಲ್ಲ. ಗುಜರಾತ್‌ನಲ್ಲಿ ಈ ಬಾರಿಯೂ ಜನ ಬಿಜೆಪಿಗೆ ಮತ ಕೊಟ್ಟಿದ್ದಾರೆ. ಆದ್ರೆ ಈ ಫಲಿತಾಂಶ ಕರ್ನಾಟಕದ ಚುನಾವಣೆ ಮೇಲೆ ಯಾವ ಪರಿಣಾಮವೂ ಬೀರುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು,  ಈ ಫಲಿತಾಂಶ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರಾಜ್ಯದಲ್ಲಿ ಮೋದಿಯವರ ಯಾವ ಹವಾನೂ ಇಲ್ಲ. ಗುಜರಾತ್‌ ಹಾಗೂ ಹಿಮಾಚಲದಲ್ಲಿ ಆಮ್‌ ಆದ್ಮಿ ಪಾರ್ಟಿಯಿಂದ ಕಾಂಗ್ರೆಸ್‌ ಮತ ವಿಭಜನೆ ಆಗಿವೆ. ಈ ಫಲಿತಾಂಶಕ್ಕೂ ರಾಜ್ಯ ರಾಜಕಾರಣಕ್ಕೂ ಯಾವುದೇ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ.

Share Post