DistrictsPolitics

ಜೆಡಿಎಸ್‌ನಲ್ಲೇ ಉಳಿಯುತ್ತಾರಾ ಜಿ.ಟಿ.ದೇವೇಗೌಡರು..?; ಒಂದೇ ವೇದಿಕೆಯಲ್ಲಿ ಹೆಚ್ಡಿಕೆ-ಜಿಟಿಡಿ

ಮೈಸೂರು; ನಾನು ಹಲವಾರು ತಿಂಗಳುಗಳಿಂದ ಕುಮಾರಸ್ವಾಮಿ ಅವರ ಜೊತೆ ಮಾತು ಕೂಡಾ ಆಡಿರಲಿಲ್ಲ. ಆದರೆ ಹುಣಸೂರಿನ ಜನ ನಮ್ಮಿಬ್ಬರನ್ನೂ ಒಂದು ಮಾಡಿದ್ದಾರೆ ಎನ್ನುವ ಮೂಲಕ ಶಾಸಕ ಜಿ.ಟಿ.ದೇವೇಗೌಡರು ಜೆಡಿಎಸ್‌ನಲ್ಲೇ ಉಳಿಯುವ ಮುನ್ಸೂಚನೆ ಕೊಟ್ಟಿದ್ದಾರೆ. ಕುಮಾರಸ್ವಾಮಿ ಹಾಗೂ ಜಿ.ಟಿ.ದೇವೇಗೌಡರ ನಡುವಿನ ಸಂಬಂಧ ಹಳಸಿತ್ತು. ಜಿಟಿಡಿ ಅವರು ಕಾಂಗ್ರೆಸ್‌ ಅಥವಾ ಬಿಜೆಪಿ ಸೇರುವ  ಬಗ್ಗೆ ಚಿಂತನೆ ನಡೆಸಿದ್ದರು. ಆದ್ರೆ ಇದೀಗ ಅವರು ಮನಸ್ಸು ಬದಲಿಸಿಕೊಂಡು ಜೆಡಿಎಸ್‌ನಲ್ಲೇ ಉಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅದಕ್ಕೆ ಹುಣಸೂರಿನ  ಕಾರ್ಯಕ್ರಮ ಸಾಕ್ಷಿಯಾಗಿದೆ.

ಹುಣಸೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹಾಗೂ ಜಿ.ಟಿ.ದೇವೇಗೌಡ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ಅಲ್ಲದೇ ಹೆಚ್‌ಡಿಕೆ, ಜಿಟಿಡಿ ಹಾಗೂ ಸಾ.ರಾ.ಮಹೇಶ್‌ ಮೂವರು ಪರಸ್ಪರ ಕೈ ಹಿಡಿದು ಕಾರ್ಯಕ್ರಮದ ದೀಪ ಬೆಳಗಿದರು. ಜಿ.ಟಿ.ದೇವೇಗೌಡರ ನಂತರ ಅವರ ಪುತ್ರ ಜಿ.ಡಿ.ಹರೀಶ್‌ ಗೌಡ ಜೊತೆ ಹೆಚ್‌ಡಿಕೆ ಮಾತುಕತೆ ನಡೆಸಿ ಗಮನ ಸೆಳೆದರು.

Share Post