CrimeDistricts

ಪ್ರವೀಣ್‌ ಕುಟುಂಬ ಭೇಟಿ ಮಾಡಿದ ಹೆಚ್ಡಿಕೆ; 5 ಲಕ್ಷ ರೂ. ಪರಿಹಾರ

ಮಂಗಳೂರು; ಇತ್ತೀಚೆಗೆ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಭೇಟಿ ನೀಡಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಜೊತೆಗೆ ವೈಯಕ್ತಿಕವಾಗಿ ಪ್ರವೀಣ್‌ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ವಿತರಿಸಿದರು.

ಇದೇ ವೇಳೆ ಮಾತನಾಡಿದ ಕುಮಾರಸ್ವಾಮಿ, ಪ್ರವೀಣ್ ಕುಟುಂಬ ಸಂಪೂರ್ಣ ಕಷ್ಟದಲ್ಲಿರೋದು ಗೊತ್ತಾಯಿತು. ಪ್ರವೀಣ್ ಕುಟುಂಬಕ್ಕೆ ನನ್ನ ಮೊಬೈಲ್ ನಂಬರ್ ನೀಡಿದ್ದೇನೆ. ಯಾವುದೇ ಸಂದರ್ಭದಲ್ಲಿ ಸಮಸ್ಯೆಯಾದರೆ ನೇರವಾಗಿ ಕರೆ ಮಾಡಿ ಮಾತನಾಡಬಹುದು. ಅಗತ್ಯಬಿದ್ದರೆ ಮತ್ತೆ ಆರ್ಥಿಕ ಹಣಕಾಸು ನೀಡುತ್ತೇವೆ ಎಂದು ಭರವಸೆ ನೀಡಿದರು.

ಪ್ರವೀಣ್‌ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ಆಗಬೇಕು. ಪ್ರವೀಣ್‌ ಕುಟುಂಬದ ಆಗ್ರಹ ಕೂಡಾ ಅದೇ ಆಗಿದೆ. ಅವರ ನೋವನ್ನ ನಮ್ಮ ಮುಂದೆ ಹೇಳಿಕೊಂಡಿದ್ದಾರೆ ಎಂದು ಹೆಚ್ಡಿಕೆ ಹೇಳಿದರು.

Share Post