Districts

HARSHA MURDER CASE: ಮೆರವಣಿಗೆ ವೇಳೆ ಕಲ್ಲು ತೂರಾಟ; ಗಾಳಿಯಲ್ಲಿ ಗುಂಡು ಹಾರಿಸಿದ ಪೊಲೀಸರು

ಶಿವಮೊಗ್ಗ: ರಾತ್ರಿ ಕೊಲೆಯಾಗಿದ್ದ ಹಿಂದೂಪರ ಸಂಘಟನೆ ಕಾರ್ಯಕರ್ತ ಹರ್ಷ ಅವರ ಅಂತಿಮ ಯಾತ್ರೆ ನಡೆಯುತ್ತಿದೆ. ಈ ವೇಳೆ ಮತ್ತೆ ಕೆಲ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ. ಮೆರವಣಿಗೆ ಶಿವಪ್ಪ ನಾಯಕ ವೃತ್ತದ ಬಳಿ ಬರುವ ವೇಳೆ ಕೆಲ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅಶ್ರುವಾಯು ಸಿಡಿಸಿ ಉದ್ರಿಕ್ತರನ್ನು ಚದುರಿಸಲು ಹರಸಾಹಪಡುತ್ತಿದ್ದಾರೆ. ಜೊತೆಗೆ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ.

ಸದ್ಯ ಮೆರವಣಿಗೆ ಕೆಆರ್‌ ಪುರಂ ಸಿದ್ದಯ್ಯ ರಸ್ತೆಯಲ್ಲಿ ಸಾಗುತ್ತಿದೆ. ಇಲ್ಲೂ ಕೂಡಾ ಉದ್ರಿಕ್ತರು ಕಲ್ಲು ತೂರಿದ್ದಾರೆ. ಘಟನೆಯಲ್ಲಿ ಒಬ್ಬನಿಗೆ ಗಂಭಿರವಾಗಿ ಗಾಯಗಳಾಗಿವೆ. ಪರಿಸ್ಥಿತಿ ನಿಯಂತ್ರಣಕ್ಕೆ ಬರದ ಹಿನ್ನೆಲೆಯಲ್ಲಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಪರಿಸ್ಥಿತಿ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ.

 

 

Share Post