Districts

HARSHA MURDER CASE: ಇದುವರೆಗೆ ಆರು ಆರೋಪಿಗಳ ಬಂಧನ; ಎಸ್ಪಿ ಲಕ್ಷ್ಮೀ ಪ್ರಸಾದ್‌

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರೆಲ್ಲರೂ ಶಿವಮೊಗ್ಗದವರೇ ಎಂದು ಶಿವಮೊಗ್ಗ ಎಸ್ಪಿ ಬಿ.ಎಂ.ಲಕ್ಷ್ಮೀ ಪ್ರಸಾದ್‌ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎ೧, ಎ೨ ಇಬ್ಬರೂ ಆರೋಪಿಗಳನ್ನು ಶಿವಮೊಗ್ಗದಲ್ಲೇ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೊದಲು ಖಾಸಿಫ್‌, ನದೀಮ್‌ ಎಂಬುವವರನ್ನು ಬಂಧಿಸಲಾಗಿತ್ತು. ಅನಂತರ ಅವರು  ನೀಡಿದ ಮಾಹಿತಿ ಮೇರೆಗೆ ಇನ್ನೂ ನಾಲ್ವರು ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮೀಪ್ರಸಾದ್‌ ತಿಳಿಸಿದ್ದಾರೆ. ಇನ್ನು ಈ ಪ್ರಕರಣ ಸಂಬಂಧ ಇದುವರೆಗೆ 12 ಎಫ್‌ಐಆರ್‌ಗಳು ದಾಖಲಾಗಿವೆ ಎಂದು ತಿಳಿಸಿದ್ದಾರೆ. ಎ-೧ ಹಾಗೂ ಎ-೬ ಹರ್ಷನ ಹತ್ಯೆಗೆ ಸಹಕಾರ ನೀಡಿದ್ದಾರೆ. ಉಳಿದವರು ಹರ್ಷನನ್ನು ಕೊಲೆ ಮಾಡಿದ್ದಾರೆ ಎಂದು ಎಸ್ಪಿ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.   ಎ-೧ ಖಾಸಿಫ್‌, ಎ-೨ ನದೀಮ್‌, ಎ-೩ ಆಸಿಫ್‌ ಉಲ್ಲಾ ಖಾನ್‌, ಎ-೪ ರಿಹಾನ್‌, ಎ-೫ ನಿಹಾನ್‌, ಎ-೬ ಅಬ್ದುಲ್‌ ಇವರು ಬಂಧಿತರು.

ಇನ್ನೂ ಎರಡು ದಿನ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಮುಂದುವರೆಸಲು ನಿರ್ಧರಿಸಲಾಗಿದೆ. ಶುಕ್ರವಾರದವರೆಗೂ ಶಿವಮೊಗ್ಗದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Share Post