Districts

ಅಧಿವೇಶನ ಬಳಿಕ ಪ್ರತ್ಯೇಕ ಹಾಲು ಒಕ್ಕೂಟದ ಉದ್ಘಾಟನೆ-ಸಿಎಂ ಭರವಸೆ

ಹಾವೇರಿ:  ಹಾವೇರಿ ಜಿಲ್ಲೆಯ ಹಿರೇಬೆಂಡಿಗೇರಿ ಗ್ರಾಮದಲ್ಲಿ ಸವಣೂರು ಏತ ನೀರಾವರಿ ಯೋಜನೆಯಡಿ 48 ಕೆರೆಗಳಿಗೆ ತುಂಬಿಸುವ ಯೋಜನೆಯಡಿ ತುಂಬಿರುವ ಕೆರೆಗೆ ಸಿಎಂ ಬಸವರಾಜ್‌ ಬೊಮ್ಮಾಯಿಯವರು ಬಾಗಿನ ಅರ್ಪಿಸಿದರು. ಬಳಿಕ ಮಾತನಾಡಿದ ಅವರು, ಸವಣೂರು ಏತ ನೀರಾವರಿ ಯೋಜನೆಯಡಿ 48 ಕೆರೆಗಳಿಗೆ ತುಂಬಿಸುವ ಯೋಜನೆ ಪೂರ್ಣಗೊಂಡಿದೆ. ಸವಣೂರು ಕ್ಷೇತ್ರದಲ್ಲಿಯಲ್ಲದೆ, 14,000 ಎಕರೆ ನೀರಾವರಿ ಯೋಜನೆಗಳು ಪೂರ್ಣಗೊಳ್ಳಲಿವೆ. ಬ್ಯಾಡಗಿ ಹಾಗೂ ಹಾನಗಲ್ ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳನ್ನು ಅಧಿವೇಶನದ ನಂತರ ಉದ್ಘಾಟನೆಗೊಳ್ಳಲಿವೆ ಎಂದರು.

ಇದರ ಜೊತೆಗೆ ಹಾವೇರಿ ಜಿಲ್ಲೆಗೆ ಪ್ರತ್ಯೇಕವಾದ ಹಾಲು ಒಕ್ಕೂಟ ಸ್ಥಾಪಿಸುವ ಪ್ರಕ್ರಿಯೆಯೂ ಅಂತಿಮ ಘಟ್ಟದಲ್ಲಿದ್ದು, ಅಧಿವೇಶನದ ನಂತರ ಪ್ರತ್ಯೇಕ ಮಾಡಿ ಉದ್ಘಾಟನೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ರು.

ರಾಜ್ಯದಲ್ಲಿ ಶಾಂತಿ ನೆಲಸಬೇಕು:
ಹಿಜಾಬ್ ಸಂಬಂಧಿಸಿದಂತೆ  “ರಾಜ್ಯದಲ್ಲಿ ಶಾಂತಿ ನೆಲಸಬೇಕು. ಉಚ್ಛ ನ್ಯಾಯಾಲಯದ ಆದೇಶವನ್ನು ಪರಿಪೂರ್ಣವಾಗಿ ಜಾರಿ ಮಾಡಬೇಕು. ಮಕ್ಕಳು ಯಾವುದೇ ಭೇಧಭಾವವಿಲ್ಲದೆ, ಒಮ್ಮನಸ್ಸಿನಿಂದ ಮೊದಲಿನಂತೆ ವಿದ್ಯಾರ್ಜನೆ ಮಾಡುವಂತೆ ಮಾಡುವುದು ನನ್ನ ಮೊದಲ ಕರ್ತವ್ಯ” ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ರಾಜ್ಯ ಸರ್ಕಾರ ಸಾಲದ ಸುಳಿಯಲ್ಲಿ ಸಿಲುಕಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಕೋವಿಡ್ ಇಲ್ಲದ ಸಂದರ್ಭದಲ್ಲಿಯೂ ಅತಿ ಹೆಚ್ಚು ಸಾಲವನ್ನು ಮಾಡಿದ ಸರ್ಕಾರ ಎಂಬ ಶ್ರೇಯಸ್ಸು ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ಹಿಂದಿನ ಸಾಲಗಳನ್ನು ನಿಭಾಯಿಸಿ, ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಹಿಂಜರಿತವನ್ನೂ ನಿಭಾಯಿಸಿ, ಆರ್ಥಿಕತೆ ಚೇತರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಸಂಪನ್ಮೂಲಗಳನ್ನು ಹೆಚ್ಚಿಸಲು ಸರ್ವ ಪ್ರಯತ್ನವನ್ನೂ ನಮ್ಮ ಸರ್ಕಾರದಿಂದ ಮಾಡಲಾಗುತ್ತಿದೆ. ಎಲ್ಲವನ್ನೂ ಸರಿದೂಗಿಸಿ ಆಯವ್ಯಯವನ್ನು ಮಂಡಿಸಲಾಗುವುದು ಎಂದು ತಿರುಗೇಟು ನೀಡಿದ್ರು.

Share Post