CrimeDistricts

Corruption: ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 26 ಕೋಟಿ ರೂ. ದುರ್ಬಳಕೆ-ಹಗರಣ ಬಹಿರಂಗ

ಹಾಸನ: ರಾಮನಗರ ಮತ್ತು ಮಂಡ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ(development authority) 26 ಕೋಟಿ ರೂ. ಹಣವನ್ನು ದುರ್ಬಳಕೆ(corruption) ಮಾಡಿಕೊಳ್ಳಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ರಾಮನಗರ ಕ್ಷೇತ್ರದ ನಗರ ಪ್ರದೇಶದ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಹೋದಾಗ ಈ ಹಗರಣದ ಬಗ್ಗೆ ಮಾಹಿತಿ ಸಿಕ್ಕಿದೆ. ರಾಮನಗರ ಮತ್ತು ಮಂಡ್ಯ ಪ್ರಾಧಿಕಾರದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ʻಬ್ಯಾಂಕ್ʼನಲ್ಲಿ ಹಣ ಠೇವಣಿ ಮಾಡಿದ್ದೇವೆ ಎಂದು ಹೇಳಿಕೊಂಡು ಹಣ ಹೊಡೆದಿದ್ದಾರೆ. ಇದು ಯಾರಿಂದ ಆಗಿದೆ? ಈ ಹಣ ಎಲ್ಲಿ ಹೋಗಿದೆ? ಯಾರು ಬಳಕೆ ಮಾಡಿದ್ದಾರೆ? ಎನ್ನುವುದು ತನಿಖೆ ನಡೆದರೆ ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕಾಂಗ್ರೆಸ್ ನಾಯಕರು ಈಗಿನ ಈಗಿನ ಬಿಜೆಪಿ ಸರಕಾರವನ್ನು ಲೂಟಿ ಸರ್ಕಾರ ಎಂದು ಕರೆಯುತ್ತಿದ್ದಾರೆ. ಆದರೆ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದರೂ ಈವರೆಗೆ ಒಂದೇ ಒಂದು ರೂಪಾಯಿ ಹಣ ವಾಪಸ್ ಬಂದಿಲ್ಲ. ಈ ವಿಷಯವನ್ನು ನಾನು ಸಿದ್ದರಾಮಯ್ಯ ಅವರ ಸರಕಾರವಿದ್ದಾಗಲೂ ಗಮನಕ್ಕೆ ತಂದಿದ್ದೆ. ರಾಜ್ಯದ ವಿವಿಧ ಇಲಾಖೆಗಳ ಹಣವನ್ನು ಖಾಸಗಿ ಬ್ಯಾಂಕ್ʼಗಳಲ್ಲಿ ಠೇವಣಿ ಇಡಲಾಗಿದ್ದು, ಆ ಹಣವನ್ನು ಖಜಾನೆಗೆ ವಾಪಸ್ ತೆಗೆದುಕೊಳ್ಳಿ ಎಂದು ಸಲಹೆ ನೀಡಿದ್ದೆ. ಆದರೆ ಅವರು ಏನನ್ನು ಮಾಡಲಿಲ್ಲ ಎಂದು ಕುಮಾರಸ್ವಾಮಿ ದೂರಿದ್ದಾರೆ.

ಅಂದು ನಗರಾಭಿವೃದ್ಧಿ ಪ್ರಾಧಿಕಾರದ ಅಯುಕ್ತರಾಗಿದ್ದವರಿಗೆ, ಆರೋಪಕ್ಕೆ ಗುರಿಯಾದವರಿಗೆ ಉತ್ತಮ ಇಲಾಖೆಯಲ್ಲಿ ದೊಡ್ಡ ದೊಡ್ಡ ಹುದ್ದೆ ನೀಡಲಾಯಿತು. ರಾಜ್ಯದಲ್ಲಿ ಸರ್ಕಾರದ ಹಣ ಯಾವ ರೀತಿಯಲ್ಲಿ ಲೂಟಿ ಆಗುತ್ತಿದೆ ಎನ್ನುವುದಕ್ಕೆ ಇದೊಂದು‌ ಸಾಕ್ಷಿ ಎಂದ್ರು.

Share Post