CrimeDistricts

ಕಂಠಪೂರ್ತಿ ಕುಡಿದ, ಮತ್ತಿನಲ್ಲಿ ಕೈಕುಯ್ದುಕೊಂಡ; ನಂತರ ಏನಾಯ್ತು ಗೊತ್ತಾ..?

ಚಿಕ್ಕೋಡಿ; ಮೂವತ್ತೆರಡು ವರ್ಷದ ಯುವಕನೊಬ್ಬ ಕಂಠಪೂರ್ತಿ ಕುಡಿದಿದ್ದು, ಕುಡಿದ ಮತ್ತಿನಲ್ಲಿ ಬ್ಲೇಡ್‌ನಿಂದ ಕೈ ಕುಯ್ದಿಕೊಂಡಿದ್ದು, ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾನೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಈ ಘಟನೆ ನಡೆದಿದೆ. 

ಮೂವತ್ತೆರಡು ವರ್ಷದ ಪರಶುರಾಮ ತೇಲಸಂಗ ಎಂಬಾತನೇ ಸಾವನ್ನಪ್ಪಿದ ಯುವಕ. ಈಗ ಕಾಗವಾಡ ತಾಲ್ಲೂಕಿನ ಮೋಳೆ ಗ್ರಾಮದ ನಿವಾಸಿ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಪರಶುರಾಮ ತೇಲಸಂಗ ಭಾನುವಾರ ರಾತ್ರಿ ಮೋಳೆ ಗ್ರಾಮದ ಲಕ್ಷ್ಮೀ ದೇವಸ್ಥಾನದ ಬಳಿ ಬ್ಲೇಡ್‌ನಿಂದ ಕೈ ಕುಯ್ದುಕೊಂಡಿದ್ದಾನೆ.

ಇದನ್ನು ನೋಡಿ ಸ್ಥಳೀಯರು ಆತನನ್ನು ಅಥಣಿಯ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದರು. ಆದ್ರೆ ಅಷ್ಟೊತ್ತಿಗಾಗಲೇ ತೀವ್ರ ರಕ್ತಸ್ರಾವವಾಗಿತ್ತು. ಹೀಗಾಗಿ ಚಿಕಿತ್ಸೆ ಫಲಿಸದೇ ಆತ ಸಾವನ್ನಪ್ಪಿದ್ದಾನೆ. ಕಾಗವಾಡ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.

 

Share Post