DistrictsHealth

ಬಸ್‌ ಚಲಾಯಿಸುತ್ತಿದ್ದಾಗ ಹೃದಯಾಘಾತ; ಪ್ರಯಾಣಿಕರ ಪ್ರಾಣ ಉಳಿಸಿ ಪ್ರಾಣಬಿಟ್ಟ ಡ್ರೈವರ್‌!

ಬೆಳಗಾವಿ; ರಾಜ್ಯದಲ್ಲಿ ಮತ್ತೊಂದು ಹೃದಯಾಘಾತ ಪ್ರಕರಣ ವರದಿಯಾಗಿದೆ. ಸರ್ಕಾರಿ ಬಸ್‌ ಚಾಲಕರೊಬ್ಬರಿಗೆ ಬಸ್‌ ಚಲಾಯಿಸುವಾಗಲೇ ಹೃದಯಾಘಾತವಾಗಿದ್ದು, ಬಸ್‌ನ್ನು ಪಕ್ಕಕ್ಕೆ ನಿಲ್ಲಿಸಿದ ಮೇಲೆ ಅವರು ಸಾವನ್ನಪ್ಪಿದ್ದಾರೆ. ಪುಣೆಯಿಂದ ಸವದತ್ತಿಗೆ ಬರುವ ವೇಳೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಮಹಾರಾಷ್ಟ್ರದ ಖೇಡಶಿವಾಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ. 

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದ ಬಸ್ ಚಾಲಕ ಮೂಗಪ್ಪ ಶಿವಪುತ್ರಪ್ಪ ಸಂಗೊಳ್ಳಿ (41)  ಮೃತಪಟ್ಟವರು. ಬಸ್‌ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸವದತ್ತಿ ಘಟಕಕ್ಕೆ ಸೇರಿದ್ದಾಗಿದೆ. ಬಸ್‌ ಪುಣೆಯಿಂದ ಸವದತ್ತಿಯತ್ತ ಬರುತ್ತಿತ್ತು. ಈ ವೇಳೆ ಈ ಘಟನೆ ನಡೆದಿದೆ. ಎದೆನೋವು ಕಾಣಿಸಿಕೊಂಡಿದ್ದರಿಂದ ಮೂಗಪ್ಪ ಅವರು ಬಸ್‌ನ್ನು ಪಕ್ಕಕ್ಕೆ ನಿಲ್ಲಿಸಿದ್ದಾರೆ. ನಂತರ ಪ್ರಯಾಣಿಕರು ಆಂಬುಲೆನ್ಸ್‌ ಕರೆಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದಾರೆ.

 

Share Post