DistrictsHealth

ಶಾಲೆಯಲ್ಲಿ ಪಾಠ ಮಾಡುವಾಗ ಹೃದಯಾಘಾತ; ಶಿಕ್ಷಕ ಸಾವು

ದಾವಣಗೆರೆ; ಶಿಕ್ಷಕರೊಬ್ಬರು ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡುವ ವೇಳೆ ಹೃದಯಘಾತ ಸಂಭವಿಸಿ ಮೃತಪಟ್ಟ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಭಾನುವಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಘಟನೆ ನಡೆದಿದೆ. ಇಂಗ್ಲೀಷ್ ವಿಷಯದ ಶಿಕ್ಷಕ ವಿಜಯ್ ಕುಮಾರ್( 54) ಮೃತ ದುರ್ದೈವಿ ಶಿಕ್ಷಕರಾಗಿದ್ದಾರೆ.

ದಾವಣಗೆರೆ ಮೂಲದ ಶಿಕ್ಷಕ ವಿಜಯ್ ಕುಮಾರ್ ಶಾಲೆಯಲ್ಲಿ ಪಾರ್ಥನೆ ಬಳಿಕ ಮಕ್ಕಳಿಗೆ ಪಾಠ ಮಾಡುತ್ತಿದ್ದರು ಈ ವೇಳೆ ಹೃದಯಾಘಾತಕ್ಕೆ ಒಳಗಾಗಿ ಕುಸಿದುಬಿದ್ದಿದ್ದಾರೆ. ಸಹ ಶಿಕ್ಷಕರು ಕೂಡಲೇ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರಾದ್ರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಣ್ಣೆದುರೆ ಶಿಕ್ಷಕರು ಮೃತಪಟ್ಟಿದ್ದನ್ನು ಕಂಡಹ ಮಕ್ಕಳು ಕಣ್ಣೀರು ಹಾಕಿದ್ದಾರೆ.

Share Post