Districts

ಹೆಡಗೇವಾರ್‌ ಕಾಂಗ್ರೆಸ್‌ ಕಾರ್ಯಕರ್ತ; ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ

ತುಮಕೂರು; ಆರ್‌ಎಸ್‌ಎಸ್ ಸಂಸ್ಥಾಪಕ ಹೆಡಗೇವಾರ್ ಮೊದಲು ಕಾಂಗ್ರೆಸ್‌ನಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದರು. ಆ ಪಕ್ಷದಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡಿದ್ದರು ಎಂದು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹೇಳಿದ್ದಾರೆ. ತುಮಕೂರಿನಲ್ಲಿ ನಡೆದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹೆಡಗೇವಾರ್‌ ಅವರೇ 1921ರಲ್ಲಿ ನಾಗಪುರದಲ್ಲಿ ನಡೆದ ಕಾಂಗ್ರೆಸ್ ಅಧಿವೇಶನವನ್ನು ಸಂಪೂರ್ಣವಾಗಿ ಆಯೋಜನೆ ಮಾಡಿದ್ದರು. ಹೆಡಗೇವಾರ್ ತೀರಿಕೊಳ್ಳುವವರಿಗೂ ಯಾವುದೇ ರಾಜಕೀಯ ಸೂಚನೆ ಕೊಟ್ಟಿರಲಲ್ಲ. RSS ಸಂಘಟನೆ ಕಟ್ಟಿದ್ದರು ಎಂದರು. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಕೇಶವ ಬಲಿರಾಮ್ ಹೆಡಗೇವಾರ್ ಅವರು ಅನುಶೀಲನಾ ಸಮಿತಿಯ ಸದಸ್ಯರಾಗಿದ್ದರು. ಇಂದಿನ ಕೆಲವರಿಗೆ ಅನುಶೀಲನಾ ಸಮಿತಿ ಎಂದರೆ ಏನು ಅಂತ ಗೊತ್ತಿರಲಿಕ್ಕಿಲ್ಲ ಎಂದು ಲೇವಡಿ ಮಾಡಿದರು. ಬಂಗಾಳದಲ್ಲಿ ಅನುಶೀಲಾ ಸಮಿತಿ ಬ್ರಿಟೀಷರ ವಿರುದ್ಧ ಹೋರಾಟ ನಡೆಸಿತ್ತು ಎಂದು ರೋಹಿತ್‌ ಇದೇ ವೇಳೆ ಹೇಳಿದ್ದಾರೆ.

Share Post