Districts

HIJAB CASE; ರಾಜಕೀಯಕ್ಕಾಗಿ ಮಕ್ಕಳ ದುರುಪಯೋಗವಾಗ್ತಿದೆ; ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ

ಚನ್ನಪಟ್ಟಣ: ಹಿಜಾಬ್‌ ವಿಚಾರದಲ್ಲಿ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ತಮ್ಮ ತೆವಲಿಗಾಗಿ ವಿದ್ಯಾರ್ಥಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಎತ್ತಿಕಟ್ಟಿದ್ದರಿಂದಾಗಿ ಕೆಲವೊಂದು ಅಹಿತಕರ ಘಟನೆಗಳು ನಡೆದಿವೆ. ಮುಂದೆ ಇದ್ರಿಂದ ವಿದ್ಯಾರ್ಥಿಗಳಿಗೆ ತೊಂದರೆ ಕೊಡುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಚೆನ್ನಪಟ್ಟಣದಲ್ಲಿ ಮಾತನಾಡಿದ ಅವರು, ಕಾಲೇಜುಗಳ ಮುಂದೆ ನಡೆದ ಗಲಾಟೆಗಳ ಸಂದರ್ಭದಲ್ಲಿ ಎಲ್ಲಾ ವಿಡಿಯೋ ಚಿತ್ರೀಕರಣ ಆಗಿದೆ. ಇದನ್ನಿಟ್ಟುಕೊಂಡು ಕೇಸ್‌ ದಾಖಲಿಸುವ ಕೆಲಸಗಳನ್ನು ಮುಂದಿನ ದಿನಗಳಲ್ಲಿ ಮಾಡಲಾಗುತ್ತದೆ. ಈಗಾಗಲೇ ಕೆಲವು ವಿದ್ಯಾರ್ಥಿಗಳನ್ನು ಬಂಧಿಸಿರುವುದೂ ಗೊತ್ತಾಗಿದೆ. ಇದ್ರಿಂದಾಗಿ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ. ರಾಜಕಾರಣಿಗಳು ವಿದ್ಯಾರ್ಥಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಈ ಅನುಭವಿಸುವುದು ವಿದ್ಯಾರ್ಥಿಗಳು ಎಂದು ಹೇಳಿದರು.

ಕೇಸ್‌ ಹೈಕೋರ್ಟ್‌ ಅಂಗಳದಲ್ಲಿದೆ. ಹೀಗಾಗಿ ಹೈಕೋರ್ಟ್‌ ಆದಷ್ಟು ಬೇಗ ಪರಿಸ್ಥಿತಿಯನ್ನು ತಿಳಿಗೊಳಿಸಬೇಕು. ಸಂವಿಧಾನದ ಅಡಿಯಲ್ಲಿ ಕೋರ್ಟ್‌ ಬೇಗ ತೀರ್ಪು ನೀಡಬೇಕೆಂದು ಕುಮಾರಸ್ವಾಮಿಯವರು ಹೇಳಿದರು.

Share Post