Districts

ನಿಷೇಧಾಜ್ಞೆ ಉಲ್ಲಂಘಿಸಿ ಹಿಜಾಬ್‌ ಪರ ಘೋಷಣೆ; 58 ವಿದ್ಯಾರ್ಥಿನಿಯರ ಅಮಾನತು

ಶಿವಮೊಗ್ಗ: ಶಿರಾಳಕೊಪ್ಪ ಪಟ್ಟಣದ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಹಲವಾರು ವಿದ್ಯಾರ್ಥನಿಯರು ಹಿಜಾಬ್‌ ‍ಪರ ಘೋಷಣೆ ಕೂಗಿದ್ದರು. ಈ ಹಿನ್ನೆಲೆಯಲ್ಲಿ 58 ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ. ಕೋರ್ಟ್‌ ಆದೇಶವಿದ್ದರೂ ಶಾಲಾ ಆವರಣದಲ್ಲಿ ಹಿಜಾಬ್‌ ಧರಿಸಿ ಪ್ರತಿಭಟನೆ ನಡೆಸಿದ್ದರು. ಜೊತೆಗೆ ಮೆರವಣಿಗೆ ಕೂಡಾ ನಡೆಸಿದ್ದರು.

ಅಧಿಕಾರಿಗಳು ವಿದ್ಯಾರ್ಥಿನಿಯರಿಗೆ ಮನವರಿಕೆ ಮಾಡಿಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಇತರೆ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ. ಅಮಾನತು ಆದೇಶ ತೆರವಾಗುವವರೆಗೂ ವಿದ್ಯಾರ್ಥಿನಿಯರು ಶಾಲಾ ಆವರಣ ಪ್ರವೇಶಿಸುವಂತಿಲ್ಲ.

Share Post