Districts

Hijab controversy: ಕಾಪು ಪೇಟೆಯಲ್ಲಿ ಪೊಲೀಸ್‌ ಪಥ ಸಂಚಲನ

ಮಂಗಳೂರು:  ಹಿಜಾಬ್- ಕೇಸರಿ ವಿವಾದದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕಾಪು ವೃತ್ತ ವ್ಯಾಪ್ತಿಯ ಪೊಲೀಸರು ಕಾಪು ಪೇಟೆಯಲ್ಲಿಂದು ಪಥ ಸಂಚಲನ ನಡೆಸಿದ್ರು.

ವೃತ್ತ ನಿರೀಕ್ಷಕ ಪ್ರಕಾಶ್ ನೇತೃತ್ವದಲ್ಲಿ ಕಾಪು, ಪಡುಬಿದ್ರೆ, ಶಿರ್ವ ಠಾಣಾ ವ್ಯಾಪ್ತಿಯ ಸುಮಾರು 90 ಪೊಲೀಸರು ಈ ಪಥ ಸಂಚಲನದಲ್ಲಿ ಭಾಗಿಯಾಗಿದ್ದರು.

ಪಡುಬಿದಿರೆ ಸಬ್‌ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್, ಶಿರ್ವ ಸಬ್‌ ಇನ್ಸ್‌ಪೆಕ್ಟರ್  ಶ್ರೀಶೈಲಾ, ಕಾಪು ಸಬ್‌ ಇನ್ಸ್‌ಪೆಕ್ಟರ್ ರಾಘವೇಂದ್ರ ಸಿ. ಕ್ರೈಂ‌ ಸಬ್‌ ಇನ್ಸ್‌ಪೆಕ್ಟರ್ ತಿಮ್ಮೇಶ್, ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಡಿಆರ್ ತುಕಡಿ ಕೂಡಾ ಪಥ ಸಂಚಲನದಲ್ಲಿ ಪಾಲ್ಗೊಂಡಿತ್ತು.

Share Post