Districts

ಸಿಎಂ ತವರು ಜಿಲ್ಲೆಗೂ ಕಾಲಿಟ್ಟ ಹಿಜಾಬ್‌, ಕೇಸರಿ ಶಾಲು ವಿವಾದ

ಹಾವೇರಿ: ಶಾಲಾ ಸಮವಸ್ತ್ರ ವಿಚಾರವಾಗಿ ರಾಜ್ಯ ಸರ್ಕಾರ ಸ್ಪಷ್ಟ ಆದೇಶ ನೀಡಿದ್ದರೂ, ಇಂದೂ ಕೂಡಾ ರಾಜ್ಯಾದ್ಯಂತ ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದ ಮುಂದುವರೆದಿದೆ. ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಗೂ ಹಿಜಾಬ್‌ ಹಾಕಿಕೊಂಡು ಕಾಲೇಜಿಗೆ ಬಂದು ಗೊಂದಲ ಸೃಷ್ಟಿಸಿದ್ದಾರೆ.

ಕರಾವಳಿ ಪ್ರದೇಶದಲ್ಲಿ ಹುಟ್ಟಿಕೊಂಡ ಈ ವಿವಾದ ಈಗಾ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವ್ಯಾಪಿಸಿದೆ. ಸಿಎಂ ತವರು ಜಿಲ್ಲೆಯಲ್ಲೂ ಈ ವಿವಾದ ಕಾಣಿಸಿಕೊಳ್ಳುತ್ತಿದೆ. ಹಾವೇರಿಯಲ್ಲಿ ವಿದ್ಯಾರ್ಥಿಗಳು ಇಂದು ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದಿದ್ದರು.

Share Post