DistrictsPolitics

ಹಿಜಾಬ್‌ ವಿಚಾರದಲ್ಲಿ ಕೊಂಚ ಹಿಂದೇಟು ಹೊಡೆದ ಸಿಎಂ ಸಿದ್ದರಾಮಯ್ಯ

ಮೈಸೂರು; ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನ ನಂಜನಗೂಡು ತಾಲ್ಲೂಕಿನಲ್ಲಿ ಮಾತನಾಡುತ್ತಾ, ಹಿಜಾಬ್‌ ನಿಷೇಧ ವಾಪಸ್‌ ಪಡೆಯಲು ಸೂಚಿಸಿರುವುದಾಗಿ ಹೇಳಿದ್ದರು. ಇದಕ್ಕೆ ವಿಪಕ್ಷ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಎಲ್ಲೆಡೆ ಆಕ್ರೋಶಗಳು ವ್ಯಕ್ತವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ತಮ್ಮ ಮಾತಿನ ಶೈಲಿ ಬದಲಿಸಿದ್ದಾರೆ. ಇಂದು ಮೈಸೂರಿನಲ್ಲಿ ಮಾತನಾಡಿರುವ ಅವರು, ಹಿಜಾಬ್‌ ನಿಷೇಧ ಆದೇಶ ಇನ್ನೂ ನಾವು ವಾಪಸ್‌ ಪಡೆದಿಲ್ಲ ಎಂದು ಹೇಳಿದ್ದಾರೆ.

ಹಿಜಾಬ್‌ ವಿಚಾರವಾಗಿ ಯಾರೋ ಒಬ್ಬರು ಪ್ರಶ್ನೆ ಮಾಡಿದರು. ಆಗ ನಾನು ಉತ್ತರ ಕೊಟ್ಟಿದ್ದೇನೆ. ಹಿಜಾಬ್‌ ನಿಷೇಧವನ್ನು ನಾವು ಇನ್ನೂ ವಾಪಸ್‌ ಪಡೆದಿಲ್ಲ. ಆದೇಶ ವಾಪಸ್‌ ಪಡೆಯುವ ಯೋಚನೆ ಮಾಡಿದ್ದೇವೆ. ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

Share Post