Districts

ಹಿಂದಿ ಭಾಷೆ ವಿಚಾರ; ಸುದೀಪ್‌ ಹೇಳಿಕೆ ಸಮರ್ಥಿಸಿದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ; ಹಿಂದಿ ಭಾಷೆ ವಿಚಾರ ನಡೆಯುತ್ತಿರುವ ವಿವಾದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಕೂಡಾ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿಯವರಂತೆ ಸಿಎಂ ಬೊಮ್ಮಾಯಿ ಕೂಡಾ ನಟ ಸುದೀಪ್‌ ಪರ ನಿಂತಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು,  ಭಾಷಾವಾರು ಪ್ರಾಂತ್ಯಗಳು ರಚನೆಯಾದ ಮೇಲೆ ಎಲ್ಲವೂ ರಾಷ್ಟ್ರಭಾಷೆಗಳಾಗಿವೆ. ನಮ್ಮ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ ಎಂದು ಸಿಎಂ ಬೊಮ್ಮಾಯಿ ಹೇಳುವ ಮೂಲಕ ಸುದೀಪ್‌ ಹೇಳಿಕೆಗೆ ಬೆಂಬಲ ಸೂಚಿಸಿದ್ದಾರೆ.

       ಹಿಂದಿ ಭಾಷೆಯ ಕುರಿತಂತೆ ಕಿಚ್ಚ ಸುದೀಪ್ ಸುದೀಪ್‌ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದರು. ಇದಕ್ಕೆ ಟ್ವೀಟ್‌ ಮಾಡಿದ್ದ ಬಾಲಿವುಡ್‌ ನಟ ಅಜಯ್‌ ದೇವಗನ್‌, ಹಿಂದಿ ರಾಷ್ಟ್ರ ಭಾಷೆ ಎಂದು ಹೇಳಿದ್ದರು. ಈ ಬಗ್ಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, ಸುದೀಪ್‌ ಹೇಳಿಕೆಯನ್ನು ಸಮರ್ಥಿಸಿದರು.

Share Post