Districts

ಚಿತ್ರದುರ್ಗ ಬಳಿ ಭೀಕರ ಅಪಘಾತ; ದುರಂತದಲ್ಲಿ ಇಬ್ಬರು ದುರ್ಮರಣ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೆ.ಆರ್‌.ಹಳ್ಳಿ ಗೇಟ್‌ ಬಳಿ ಇಂದು ಬೆಳಗಿನಜಾವ ಭೀಕರ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ಲಾರಿಯೊಂದು ನಿಂತಿತ್ತು. ಅದನ್ನು ಗಮನಿಸದ ಟೆಂಪೋಟ್ರಾವೆಲರ್‌ ಚಾಲಕ, ನೇರವಾಗಿ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಟೆಂಪೋ ಟ್ರಾವೆಲರ್‌ನಲ್ಲಿದ್ದ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರಲ್ಲಿ ಒಬ್ಬರ ಗುರುತು ಪತ್ತೆಯಾಗಿದೆ. 24 ವರ್ಷದ ಶ್ವೇತಾ ಮೃತ ದುರ್ದೈವಿ. ಮತ್ತೊಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ. ಟೆಂಪೊ ಗೋಕರ್ಣದಿಂದ ಬೆಂಗಳೂರು ಕಡೆ ಸಾಗುವಾಗ ಈ ಅವಘಡ ಸಂಭವಿಸಿದೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post