Districts

ಹುಬ್ಬಳ್ಳಿ ಉದ್ವಿಗ್ನ ವಿಚಾರ; ಈಗ ಪರಿಸ್ಥಿತಿ ಹತೋಟಿಗೆ ಬಂದಿದೆ – ಆರಗ ಜ್ಞಾನೇಂದ್ರ

ವಿಜಯನಗರ : ನಿನ್ನೆರಾತ್ರಿ ಓರ್ವ ಯುವಕ ತನ್ನ ಮೊಬೈಲ್ ವಾಟ್ಸಪ್​​ ಸ್ಟೇಟಸ್​ನಲ್ಲಿ ವಿವಾದಿತ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಗಲಾಟೆ ನಡೆದಿದೆ. ಸದ್ಯಕ್ಕೆ ಹುಬ್ಬಳ್ಳಿಯಲ್ಲಿ ಪರಿಸ್ಥಿತಿ ಹತೋಟಿಯಲ್ಲಿ ಇದೆ. ಈಗಾಗಲೇ ಪೋಸ್ಟ್ ಹಾಕಿದ್ದ ಆರೋಪಿ ಸೇರಿದಂತೆ ಹಲವರ ಬಂಧನವಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಹೊಸಪೇಟೆಯಲ್ಲಿ ಮಾತಮಾಡಿದ ಅವರು, ಕಾನೂನು ಕೈಗೆತ್ತಿಕೊಳ್ಳುವರನ್ನು ಬಿಡುವ ಮಾತೇ ಇಲ್ಲ, ಯಾವುದೇ ಧರ್ಮದವರಾಗಲಿ ಅವರನ್ನು ಬಿಡುವುದಿಲ್ಲ. ಇದೊಂದು ವ್ಯವಸ್ಥಿತ ಸಂಚು ಎಂದು ಮೇಲ್ನೋಟಕ್ಕೆ ಕಾಣುತ್ತೆ. ನನಗೆ ಬಂದ ಮಾಹಿತಿ ಪ್ರಕಾರ ಅಲ್ಲಿ ಮೊದಲೇ ಕಲ್ಲು ಸಂಗ್ರಹ ಮಾಡಿದ್ದಾರೆ. ನಾಲ್ಕು ಜನ ಪೊಲೀಸ್ ಹಾಗೂ ಕೆಲ ಸಿಬ್ಬಂದಿಗೆ ಗಾಯವಾಗಿದೆ. ಓರ್ವ ಪಿಎಸ್ಐ ಅವರಿಗೆ ಗಂಭೀರ ಗಾಯ ಆಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವಿವರಿಸಿದ್ದಾರೆ.

Share Post