Districts

ಹುಬ್ಬಳ್ಳಿ ಗಲಭೆ; ಪ್ರಾರ್ಥನಾ ಮಂದಿರದಲ್ಲಿ ನಡೆದಿತ್ತು ಸಂಚು – ಪ್ರಲ್ಹಾದ್‌ ಜೋಷಿ

ಹುಬ್ಬಳ್ಳಿ; ಹುಬ್ಬಳ್ಳಿ ಗಲಭೆಗೆ ಪ್ರಾರ್ಥನಾ ಮಂದಿರದಲ್ಲಿ ಸಂಚು ನಡೆದಿದೆ ಎಂಬ ಮಾಹಿತಿ ಇದೆ. ಆ ಬಗ್ಗೆ ಸತ್ಯ ಹೊರತೆಗೆಯುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಈಗಷ್ಟೇ ಒಬ್ಬ ಮಾಸ್ಟರ್‌ ಮೈಂಡ್‌ ಸಿಕ್ಕಿಬಿದ್ದಿದ್ದಾನೆ. ಇನ್ನೂ ಎಷ್ಟು ಮಾಸ್ಟರ್‌ ಮೈಂಡ್‌ಗಳಿದ್ದಾರೂ ತನಿಖೆ ನಡೆಸಬೇಕಿದೆ ಎಂದು ಹೇಳಿದ್ದಾರೆ.

 

ಗಲಭೆಗೆ ಕಾರಣರಾದವರ ವಿರುದ್ಧ ಅತ್ಯಂತ ಕಠೋರ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲವೂ ತನಿಖೆಯಿಂದ ಬಯಲಾಗಲಿದೆ. ಇದರ ಹಿಂದೆ ಯಾರೇ ಇದ್ದರೂ ಅವರನ್ನು ಬಿಡುವುದಿಲ್ಲ ಎಂದು ಪ್ರಲ್ಹಾದ್‌ ಜೋಷಿ ಹೇಳಿದ್ದಾರೆ.

 

Share Post