Districts

ಉದ್ದೇಶಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾವಣೆ; ಪ್ರತಾಪ ಸಿಂಹ

ಮೈಸೂರು; ಕೆಲ ದಿನಗಳ ಹಿಂದೆಯಷ್ಟೇ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿಗೆ ಒಡೆಯರ್‌ ಎಕ್ಸ್‌ಪ್ರೆಸ್‌ ಎಂದು ಮರುನಾಮಕರಣ ಮಾಡಲಾಗಿತ್ತು. ಕೆಲ ದಿನಗಳ ನಂತರ ಸಂಸದ ಪ್ರತಾಪ ಸಿಂಹ, ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

  ಟಿಪ್ಪು ಮೈಸೂರಿಗೆ ಸಂಬಂಧಿಸಿದವರೇ ಅಲ್ಲ. ಅವರು ಕೊಡುಗೆ ಏನೂ ಇಲ್ಲ. ಹೀಗಾಗಿ ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರನ್ನು ಬದಲಾಯಿಸಿದ್ದೇವೆ ಎಂದು ಪ್ರತಾಪ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು, ರಾಜ್ಯಕ್ಕೆ ಟಿಪ್ಪು ಕೊಡುಗೆ ಏನು ಎಂದು ಪ್ರಶ್ನೆ ಮಾಡಿದ್ದಾರೆ.

   ಮೈಸೂರಿನ ಅಭಿವೃದ್ಧಿಯಲ್ಲಿ ರಾಜರ ಕೊಡುಗೆ ಅಪಾರವಾಗಿದೆ. ಮಹಾರಾಜರು ನೀಡಿರುವ 100 ಕೊಡುಗೆಗಳನ್ನು ನಾನು ಹೇಳುತ್ತೇನೆ. ಟಿಪ್ಪುವನ್ನು ಬೆಂಬಲಿಸುವವರು ಆತ ಕೊಟ್ಟಿರುವ 3 ಸಾಧನೆಗಳನ್ನು ಹೇಳಲಿ ಸಾಕು ಎಂದು ಸವಾಲು ಎಸೆದರು.

Share Post