DistrictsPolitics

ಬಾಯಿ ತಪ್ಪಿ ಅಭ್ಯರ್ಥಿ ಘೋಷಣೆ ಮಾಡಿದ್ದೇನೆ; ಬಿಎಸ್‌ವೈ

ಬಾಗಲಕೋಟೆ; ಶಾಸಕ ಸಿದ್ದು ಸವದಿಯವರೇ ತೇರದಾಳ ಕ್ಷೇತ್ರದ ಅಭ್ಯರ್ಥಿ ಎಂದು ನಾನು ನಿನ್ನೆ ಘೋಷಣೆ ಮಾಡಿದ್ದೆ. ಆದರೆ ಅದು ಬಾಯಿತಪ್ಪಿ ಆ ರೀತಿ ಹೇಳಿದ್ದೇವೆ. ಅಭ್ಯರ್ಥಿ ಆಯ್ಕೆಯನ್ನು ಪಕ್ಷ ಚುನಾವಣಾ ಸಮಿತಿ ಮಾಡಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರು ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ನಾನು ಟಿಕೆಟ್‌ ಘೋಷಣೆ ಮಾಡುವುದು ಸರಿಯಲ್ಲ. ಪಕ್ಷದಲ್ಲಿ ಅದಕ್ಕೊಂದು ಸಮಿತಿ ಇದೆ. ಹೀಗಾಗಿ ನಾನು ಬಾಯಿ ತಪ್ಪಿ ಹೇಳಿದ್ದೇನೆ ಅಷ್ಟೇ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು. ಇನ್ನು ರಾಜ್ಯದಲ್ಲಿ ಬಿಜೆಪಿಗೆ ಉತ್ತಮ ವಾತಾವರಣವಿದ್ದು, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ನನಗಿದೆ ಎಂದು ಯಡಿಯೂರಪ್ಪ ಹೇಳಿದರು.

ಬಿಜೆಪಿಗೆ ಉತ್ತಮ ವಾತಾವರಣವಿರುವುದರಿಂದ ಪ್ರತಿ ಕ್ಷೇತ್ರದಲ್ಲೂ ಹಲವು ಟಿಕೆಟ್‌ ಆಕಾಂಕ್ಷಿಗಳಿದ್ದಾರೆ. ಗೊಂದಲ ಮಾಡಿಕೊಳ್ಳದೆ ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂದು ಯಡಿಯೂರಪ್ಪ ಕರೆ ನೀಡಿದರು. ಮಹೇಶ ಕುಮಠಳ್ಳಿಗೆ ಟಿಕೆಟ್ ನೀಡದಿದ್ದರೆ, ನಾನೂ ಸ್ಪರ್ಧಿಸುವುದಿಲ್ಲ ಎಂದು ಜಾರಕಿಹೊಳಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಬಿಎಸ್‌ವೈ, ಅವರ ಹೇಳಿಕೆ ಸೂಕ್ತ ಅಲ್ಲ ಎಂದರು.

 

Share Post