DistrictsPolitics

ಚುನಾವಣೆ ಹೊಸ್ತಿಲಲ್ಲಿ ಐಟಿ ದಾಳಿಗೆ ಸಂಚು; ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿ; ಐಟಿ ದಾಳಿ ಮೂಲಕ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅಭ್ಯರ್ಥಿಗಳನ್ನು ಭಯಬೀಳಿಸಲು ಸಂಚು ನಡೆಯುತ್ತಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿರುವ ಅವರು, ನನ್ನನ್ನು ಸೇರಿ ಐವತ್ತು ಅಭ್ಯರ್ಥಿಗಳ ಮೇಲೆ ಚುನಾವಣೆ ಹೊಸ್ತಿಲಲ್ಲಿ ಐಟಿ ದಾಳಿ ನಡೆಸಲು ಸಂಚು ನಡೆದಿದೆ ಎಂದು ಆರೋಪಿಸಿದ್ದಾರೆ.

ಚುನಾವಣೆಗೆ ಇನ್ನು ಹತ್ತು ದಿನಗಳಷ್ಟೇ ಉಳಿದಿವೆ. ಜನರ ಭಾವನೆಗಳನ್ನು ನೋಡಿದರೆ ರಾಜ್ಯದಲ್ಲಿ ಕಾಂಗ್ರೆಸ್‌ ಪರವಾದ ಅಲೆ ಇದೆ. ಬೆಳಗಾವಿ ಜಿಲ್ಲೆಯಲ್ಲೂ ಕಾಂಗ್ರೆಸ್‌ ಪರವಾದಂತಹ ವಾತಾವರಣವಿದೆ. ಇದರಿಂದ ಹತಾಶರಾಗಿರುವ ಬಿಜೆಪಿಯವರು ವಾಮಮಾರ್ಗ ಹಿಡಿಯಲು ಮುಂದಾಗಿದ್ದಾರೆ. ಐವತ್ತು ಅಭ್ಯರ್ಥಿಗಳು ಹಾಗೂ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

Share Post