DistrictsPolitics

ಸರ್ಕಾರದ ಮುಂದೆ ಭಿಕ್ಷೆ ಬೇಡಲು ಹೋಗಿದ್ದೆ; ಕಾಂಗ್ರೆಸ್‌ ಶಾಸಕನ ಅಸಮಾಧಾನದ ಮಾತು

ಬೆಳಗಾವಿ; ಕಿತ್ತೂರು ಉತ್ಸವಕ್ಕೆ ಹೆಚ್ಚಿನ ಅನುದಾನ ಪಡೆಯುವುದಕ್ಕಾಗಿ ಸರ್ಕಾರದ ಮುಂದೆ ಭಿಕ್ಷೆ ಬೇಡಲು ಹೋಗಿದ್ದೆ ಎಂದು ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಶಾಸಕನೇ ಅಸಮಾಧಾನ ತೋಡಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿರುವ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಹೆಚ್ಚಿನ ಅನುದಾನಕ್ಕಾಗಿ ಬೆಂಗಳೂರಿಗೆ ಹೋಗಿದ್ದೆ ಎಂದು ಹೇಳಿದ್ದಾರೆ. 

2021ರಲ್ಲೇ ಅಂದಿನ ಸಿಎಂ ಬಸವರಾಜ ಬೊಮ್ಮಾಯಿಯವರು ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಆಚರಿಸಲಾಗುವುದು ಎಂದು ಘೋಷಣೆ ಮಾಡಿದ್ದರು. ಈ ಉತ್ಸವಕ್ಕೆ ಐದು ಕೋಟಿ ರೂಪಾಯಿ ಅನುದಾನ ನೀಡೋದಾಗಿ ಹೇಳಿದ್ದರು. ಆದ್ರೆ ಈಗ ಸರ್ಕಾರ ಕೇವಲ ಎರಡು ಕೋಟಿ ರೂಪಾಯಿ ಮಾತ್ರ ನೀಡಿದೆ. ಹೀಗಾಗಿ ಹೆಚ್ಚಿನ ಅನುದಾನ ಕೇಳಲು ಹೋಗಿದ್ದೆ ಎಂದು ಹೇಳಿದ್ದಾರೆ.

 

 

Share Post