DistrictsPolitics

ಗೋ ಅಲ್ಲ, ಯಾವ ಪ್ರಾಣಿ ಹತ್ಯೆಯನ್ನೂ ನಾನು ಸಹಿಸಲ್ಲ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿ; ನಾನು ಗೋಹತ್ಯೆ ಒಂದೇ ಅಲ್ಲ, ಯಾವ ಪ್ರಾಣಿ ಹತ್ಯೆಯನ್ನೂ ಸಹಿಸೋದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಗೋಹತ್ಯೆ ನಿಷೇಧ ಕಾಯ್ದೆ ರದ್ದಾಗುತ್ತೆ ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾನು ಒಬ್ಬ ಮಹಿಳೆಯಾಗಿ ಯಾವುದೇ ಪ್ರಾಣಿಯ ಹತ್ಯೆಯನ್ನು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಬೆಳಗಾವಿ ಜಿಲ್ಲೆ ವಿಭಜನೆಯ ಬಗ್ಗೆಯೂ ಸಚಿವೆ ಮಾತನಾಡಿದ್ದಾರೆ. ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ‌ಜಿಲ್ಲೆ ವಿಭಜನೆ ಆಗಬೇಕು. ಎಲ್ಲ ನಾಯಕರ ಸಹಮತ ಪಡೆದು ಜಿಲ್ಲೆಯ ವಿಭಜನೆ ‌ಆಗಲಿ ಎಂದು ಹೇಳಿದರು. ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡೋದಕ್ಕೆ ಸರ್ಕಾರ ಮಟ್ಟದಲ್ಲಿ ಚರ್ಚೆ ಆಗಲಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

Share Post