Districts

ಜಿಲ್ಲಾಧಿಕಾರಿ ವಿಜಯ ಮಹಾಂತೇಶ್‌ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

ಧಾರವಾಡ: ವಿಜಯಪುರಕ್ಕೆ ವರ್ಗಾವಣೆಗೊಂಡ ಕಾರಣ ವಿಜಯಪುರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಐಎಎಸ್‌ ಅಧಿಕಾರಿ ವಿಜಯ ಮಹಾಂತೇಶ್ ದಾನಮ್ಮನವರ ಅವರ ಕಾರು ಯರಿಕೊಪ್ಪ ಬಳಿ ಪಲ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ನಾಲ್ಕರ ಯರಿಕೊಪ್ಪ ಬಳಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್‌ ಸೇರಿ ಅವರ ಕುಟುಂಬದ ಐವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. 

   ಜಿಲ್ಲಾಧಿಕಾರಿ ಮಹಾಂತೇಶ ದಾನಮ್ಮನವರ, ಅವರ ಪತ್ನಿ ಶ್ವೇತಾ ಹಾಗೂ ಮಕ್ಕಳಾದ ತನ್ವಿ, ವಿಹಾನ್ ಮತ್ತು ಚಾಲಕ ಪ್ರವೀಣ ಕುಮಾರ್‌ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಕಾರು ಪಲ್ಟಿಯಾಗಿದ್ದು, ಎಲ್ಲರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆಯಲ್ಲಿ‌ ಜಿ.ಪಂ. ಸಿಇಒ ಆಗಿದ್ದ ದಾನಮ್ಮನವರ ನಿನ್ನೆ ವಿಜಯಪುರ ಡಿಸಿಯಾಗಿ ವರ್ಗಾವಣೆಗೊಂಡಿದ್ದರು. ಇಂದು ಅಧಿಕಾರ ಸ್ವೀಕರಿಸಲು ಕುಟುಂಬ ಸಮೇತವಾಗಿ ವಿಜಯಪುರಕ್ಕೆ ತೆರಳುತ್ತಿದ್ದ ವೇಳೆ ಈ ದರ್ಘಟನೆ ನಡೆದಿದೆ.

Share Post