DistrictsPolitics

ಹೆಚ್ಚು ಲೋಕಸಭಾ ಸೀಟು ಬರದಿದ್ರೆ ರಾಜ್ಯ ಸರ್ಕಾರಕ್ಕೆ ಸಂಕಷ್ಟ; ಬೊಮ್ಮಾಯಿ

ಹುಬ್ಬಳ್ಳಿ; ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆಲ್ಲೋದಕ್ಕೆ ಸಾಧ್ಯವಿಲ್ಲ ಅನ್ನೋ ಮಾಹಿತಿ. ಒಂದು ವೇಳೆ ಹೆಚ್ಚು ಕ್ಷೇತ್ರ ಗೆಲ್ಲದಿದ್ದರೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ಭವಿಷ್ಯದ ಮೇಲೆ ಇದು ಪರಿಣಾಮ ಬೀರಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆಪರೇಷನ್‌ ಹಸ್ತಕ್ಕೆ ಕಾಂಗ್ರೆಸ್‌ ಕೈ ಹಾಕಿದೆ. ಹೇಗಾದರೂ ಮಾಡಿ ಗೆಲ್ಲಬೇಕೆಂದು ರಾಜ್ಯ ಕಾಂಗ್ರೆಸ್‌ ನಾಯಕರು ಇನ್ನಿಲ್ಲದ ಹೋರಾಟ ನಡೆಸಿದ್ದಾರೆ ಎಂದು ನಗೆಯಾಡಿದ್ದಾರೆ. ಯಾವ ಕಾರಣಕ್ಕೂ ಆಪರೇಷನ್‌ ಹಸ್ತ ಯಶಸ್ವಿಯಾಗೋದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕೂಡಾ ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ಸರಿಯಾಗಿ ಮಳೆಯಾಗಿಲ್ಲ. ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಆದ್ರೆ ಮೂರು ತಿಂಗಳಾದರೂ ಸರ್ಕಾರ ಬರಗಾಲ ಘೋಷನೆ ಮಾಡಿಲ್ಲ. ಕುಡಿಯುವ ನೀರಿನ ಸಮಸ್ಯೆಯನ್ನೂ ಪರಿಹರಿಸಿಲ್ಲ ಎಂದು ಬೊಮ್ಮಾಯಿ ಆಕ್ರೋಶ ಹೊರಹಾಕಿದ್ದಾರೆ.

 

Share Post