DistrictsPolitics

ಬೇಕಾದರೆ ಬರೆದಿಟ್ಟುಕೊಳ್ಳಿ, ಡಿಕೆಶಿ ಮತ್ತೆ ಜೈಲಿಗೆ ಹೋಗ್ತಾರೆ; ಈಶ್ವರಪ್ಪ

ಶಿವಮೊಗ್ಗ; ಬೇಕಾದರೆ ಬರೆದಿಟ್ಟುಕೊಳ್ಳಿ, ಡಿ.ಕೆ.ಶಿವಕುಮಾರ್‌ ಅವರು ಮತ್ತೆ ಜೈಲಿಗೆ ಹೋಗೇ ಹೋಗುತ್ತಾರೆ ಎಂದು ಬಿಜೆಪಿ ನಾಯಕ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ. ಡಿ.ಕೆ.ಶಿವಕುಮಾರ್‌ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ವಿಚಾರಣೆಗೆ ಹೈಕೋರ್ಟ್‌ ಸಿಬಿಐಗೆ ಅಸ್ತು ಎಂದಿರುವ ಬಗ್ಗೆ ಶಿವಮೊಗ್ಗದಲ್ಲಿ ಅವರು ಪ್ರತಿಕ್ರಿಯೆ ನೀಡಿದರು. 

ಅಕ್ರಮ ಆಸ್ತಿ ಸಂಪಾದನೆ ವಿಚಾರದಲ್ಲಿ ಡಿ.ಕೆ.ಶಿವಕುಮಾರ್‌ ಈಗಾಗಲೇ ಜೈಲು ಸೇರಿ ಜಾಮೀನಿನ ಮೇಲೆ ಇದ್ದಾರೆ. ಅವರು ಮತ್ತೆ ಜೈಲಿಗೆ ಹೋಗೇ ಹೋಗುತ್ತಾರೆ. ಅವರು ಭಂಡತನದ ರಾಜಕೀಯ ಮಾಡುತ್ತಿದ್ದಾರೆ ಎಂದು ಈಶ್ವರಪ್ಪ ಕಿಡಿಕಾರಿದರು.

 

Share Post