DistrictsPolitics

ಭಾರತ ಹಿಂದೂ ರಾಷ್ಟ್ರ ಆಗಬಾರದು; ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ

ದಾವಣಗೆರೆ; ಭಾರತ ಯಾವುದೇ ಕಾರಣಕ್ಕೂ ಹಿಂದೂ ರಾಷ್ಟ್ರವಾಗಬಾರದು. ಹಿಂದೂ ರಾಷ್ಟ್ರ ಆದರೆ ಅದಕ್ಕಿಂತ ದೊಡ್ಡ ಅಪಾಯವಿಲ್ಲ ಎಂದು ಅಂಬೇಡ್ಕರ್‌ ಅವರೇ ಹೇಳಿದ್ದಾರೆ ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆ ರುದ್ರನಕಟ್ಟೆಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟಿಸಿ ಅವರು ಮಾತನಾಡಿದರು. 

ಕೆಲವರು ದೇಶವನ್ನು ಹಿಂದೂ ದೇಶ ಮಾಡಲು ಹೊರಟಿದ್ದಾರೆ. ಆದ್ರೆ ಇದರಿಂದ ದೇಶಕ್ಕೆ ತೊಂದರೆಯಾಗುತ್ತದೆ. ನಮ್ಮ ದೇಶ ಕೂಡಾ ಅಪಘಾನಿಸ್ತಾನ ತರವೇ ಆಗುತ್ತದೆ. ಅಪಘಾನಿಸ್ತಾನ ಧರ್ಮದ ಹೆಸರಲ್ಲಿ ಸರ್ವಾಧಿಕಾರ ಮಾಡಿ ದಿವಾಳಿಯಾಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

 

Share Post