DistrictsPolitics

ಹಾಗಾದ್ರೆ ಸೋನಿಯಾಗಾಂಧಿ ವಿಷಕನ್ಯೆನಾ..?; ಯತ್ನಾಳ್‌ ಪ್ರಶ್ನೆ

ಕೊಪ್ಪಳ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮೋದಿಯವರನ್ನು ವಿಷದ ಹಾವಿಗೆ ಹೋಲಿಸಿದ್ದಾರೆ. ಹಾಗಾದರೆ ಸೋನಿಯಾಗಾಂಧಿ ವಿಷಕನ್ಯೆಯೇ ಎಂಧು ವಿಜಯಪಯರದ ಶಾಸಕ ಹಾಗೂ ಬಿಜೆಪಿ ನಾಯಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಲೇವಡಿ ಮಾಡಿದ್ದಾರೆ.

ಕೊಪ್ಪಳದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಗೌರವಾನ್ವಿತ ಪ್ರಧಾನಿಯ ಬಗ್ಗೆ ಹೇಗೆ ಮಾತನಾಡಬೇಕು ಎಂಬುದು ಗೊತ್ತಿಲ್ಲ. ಅಂತಹವರು ಎಐಸಿಸಿ ಅಧ್ಯಕ್ಷರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಮೋದಿಯವರ ನಾಯಕತ್ವವನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ. ಅಂತಹ ಮಹಾನ್‌ ನಾಯಕನ ಬಗ್ಗೆ ಈ ರೀತಿಯ ಹೇಳಿಕೆ ಸರಿಯಲ್ಲ. ನಾನು ಸೋನಿಯಾ ಗಾಂಧಿಯವರನ್ನು ವಿಷ ಕನ್ಯೆ ಎಂದು ಕರೆಯಬಹುದಾ ಹಾಗಾದರೆ ಎಂದು ಯತ್ನಾಳ್‌ ಪ್ರಶ್ನೆ ಮಾಡಿದ್ದಾರೆ.

Share Post