CrimeDistricts

ಶಿವಮೊಗ್ಗದಲ್ಲಿ ಪೊಲೀಸ್‌ ಇಲಾಖೆ ಬದುಕಿದೆಯಾ..?; ಈಶ್ವರಪ್ಪ ಪ್ರಶ್ನೆ

ಶಿವಮೊಗ್ಗ; ಈದ್‌ ಮಿಲಾದ್‌ ಮೆರವಣಿಗೆ ವೇಳೆ ನಿನ್ನೆ ಶಿವಮೊಗ್ಗದಲ್ಲಿ ಗಲಾಟೆ ನಡೆದಿತ್ತು. ಇದರಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಮೆಗ್ಗಾನ್‌ ಆಸ್ಪತ್ರೆಗೆ ಭೇಟಿ ನೀಡಿದ್ದರು. ಗಾಯಾಳುಗಳನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು. ನಡೆದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. 

ಘಟನೆ ವೇಳೆ ಏಳು ಮಂದಿ ಗಾಯಗೊಂಡಿದ್ದು, ಗಾಯಾಳುಗಳು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಈಶ್ವರಪ್ಪ ಭೇಟಿಯಾದರು. ಇದೇ ವೇಳೆ ಮಾತನಾಡಿದ ಈಶ್ವರಪ್ಪ, ಶಿವಮೊಗ್ಗದಲ್ಲಿ ಪೊಲೀಸ್‌ ಇಲಾಖೆ ಬದುಕಿದೆಯೇ ಎಂದು ಪ್ರಶ್ನೆ ಮಾಡಿದರು. ಈದ್‌ ಮಿಲಾದ್‌ ಮೆರವಣಿಗೆ ವೇಳೆ ಕೈಯಲ್ಲಿ ತಲ್ವಾರ್‌ ಹಿಡಿದುಕೊಂಡಿದ್ದರು. ಇದು ಹಿಂದೂ ಸಮಾಜಕ್ಕೆ ಕೊಡುತ್ತಿರುವ ಎಚ್ಚರಿಕೆಯಾ ಎಂದು ಈಶ್ವರಪ್ಪ ಪ್ರಶ್ನಿಸಿದ್ದಾರೆ.

 

Share Post