DistrictsPolitics

ಬಿಲ್ ಇಲ್ಲದೆ ಹಣ ಪಾವತಿ ಮಾಡುವುದು ಕಾಂಗ್ರೆಸ್ ಸಂಸ್ಕೃತಿ – ಸಿಎಂ ಬೊಮ್ಮಾಯಿ

ಕೊಪ್ಪಳ; ಬಿಲ್ ಇಲ್ಲದೆ ಹಣ ಪಾವತಿ ಮಾಡುವುದು ಕಾಂಗ್ರೆಸ್ ಪಕ್ಷದ ಸಂಸ್ಕೃತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ಆನೆಗುಂದಿಯಲ್ಲಿ ಮಾತನಾಡಿದ ಅವರು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದರು.

ವಿರೋಧ ಪಕ್ಷದ ನಾಯಕರು ಆನೆಗುಂದಿಯ ಕಾಮಗಾರಿಗಳಿಗೆ 125 ಕೋಟಿ ರೂಪಾಯಿ ಬಿಡುಗಡೆಯಾಗಿಲ್ಲ ಎಂದು ಹೇಳಿದ್ದಾರೆ. ಆದ್ರೆ ಕಾಂಗ್ರೆಸ್‌ನವರು ಹಣ ಬಿಡುಗಡೆ ಪ್ರಕ್ರಿಯೆ ಹೇಗಾಗುತ್ತದೆ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಯಾವುದೇ ಕೆಲಸಕ್ಕೆ ಮೊದಲು ಅನುಮೋದನೆಯಾಗಬೇಕು. ಅನಂತರ ಸರ್ಕಾರದ ಆದೇಶ ಹೊರಡಿಸಬೇಕು. ನಂತರ ಟೆಂಡರ್‌ಗಳನ್ನು ಕರೆದು ಬಿಲ್‌ಗಳನ್ನು ಪಾವತಿಸಬೇಕಾಗುತ್ತದೆ ಎಂದು ಸಿಎಂ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿಯ ಆಪ್ತ ವ್ಯಕ್ತಿಯೊಬ್ಬರ ಆಡಿಯೋ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ, ಈ ಹೇಳಿಕೆ ನೀಡಿದ ವ್ಯಕ್ತಿಗಳು ಇದಕ್ಕೆ ಸಂಪೂರ್ಣ ಹೊಣೆಗಾರರು ಎಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಬ್ಬರೂ ತಮ್ಮ ಆಪ್ತರು ಎಂಬ ವಸತಿ ಸಚಿವ ವಿ.ಸೋಮಣ್ಣ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಸೋಮಣ್ಣ ಅವರು ಇಬ್ಬರೊಂದಿಗೆ ಕೆಲಸ ಮಾಡಿರುವುದಾಗಿ ಹೇಳಿದ್ದಾರೆ. “ಸೋಮಣ್ಣ ಅವರೊಂದಿಗಿನ ನನ್ನ ಸ್ನೇಹ 35 ವರ್ಷಗಳಿಗಿಂತ ಹೆಚ್ಚು ಮತ್ತು ಇದು ಸತ್ಯ” ಎಂದರು.

Share Post