DistrictsPolitics

ಬಿಜೆಪಿಯವರೇ ಗಲಾಟೆ ಮಾಡಿಸಿದ್ದಾರೆ, ನಮ್ಮೂರಲ್ಲಿ ಇದುವರೆಗೂ ಗಲಾಟೆಯೇ ಆಗಿರಲಿಲ್ಲ; ಸಿದ್ದರಾಮಯ್ಯ

ರಾಯಚೂರು; ನಮ್ಮೂರಲ್ಲಿ ಇದುವರೆಗೂ ಯಾವುದೇ ಗಲಾಟೆಯೇ ಆಗಿರಲಿಲ್ಲ. ನಿನ್ನೆ ಬಿಜೆಪಿಯವರೇ ಗಲಾಟೆ ಮಾಡಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಿನ್ನೆ ಸಿದ್ದರಾಮನಹುಂಡಿಯಲ್ಲಿ ವಿ.ಸೋಮಣ್ಣ ಹಾಗೂ ಪ್ರತಾಪ ಸಿಂಹ ಪ್ರಚಾರ ಮಾಡುವಾಗ ಗಲಾಟೆ ನಡೆದಿತ್ತು. ಈ ಬಗ್ಗೆ ರಾಯಚೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ರಾಜಕೀಯ ಮಾಡಲೆಂದೇ ಈ ರೀತಿ ಗಲಾಟೆ ಸೃಷ್ಟಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ನಮ್ಮ ಊರಿನಲ್ಲಿ ಈ ಹಿಂದೆ ಯಾವುದೇ ಗಲಾಟೆ ಆಗಿರಲಿಲ್ಲ. ಯಾವುದೇ ಪಕ್ಷದವರು ಬಂದರೂ ನಮ್ಮ ಊರಿನ ಜನ ಏನೂ ಮಾತನಾಡಿರಲಿಲ್ಲ. ಈಗ ಬಿಜೆಪಿಯವರೇ ಗಲಾಟೆ ಮಾಡಿಸಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರು ನನಗೆ ಜೈಕಾರ ಕೂಗುತ್ತಿದ್ದರು. ಬಿಜೆಪಿಯವರು ಸುಮ್ಮನೆ ಹೋಗಬೇಕಿತ್ತು. ಅದು ಬಿಟ್ಟು ಅವರೇ ಗಲಾಟೆ ಮಾಡಿದ್ದಾರೆ. ಅವರು ದೂರು ಕೊಟ್ಟರೆ ನಮ್ಮವರೂ ದೂರು ಕೊಡುತ್ತಾರೆ ಎಂದು ಸಿದ್ದರಾಮಯ್ಯ ಇದೇ ವೇಳೆ ಹೇಳಿದ್ದಾರೆ.

ಇನ್ನು ಕಾಂಗ್ರೆಸ್‌ ಗ್ಯಾರೆಂಟಿ ಕಾರ್ಡ್‌ ಎಕ್ಸ್‌ಪೈರ್‌ ಆಗಿದೆ ಎಂದು ಮೋದಿ ಹೇಳಿರುವುದಕ್ಕೂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಹತಾಶೆಯಿಂದ ಅವರು ಹಾಗೆ ಮಾತನಾಡುತ್ತಿದ್ದಾರೆ. ನಾವು ೨೦೧೩ರಲ್ಲಿ ೧೬೦ ಭರವಸೆ ಕೊಟ್ಟಿದ್ದೆವು. ಅದರಲ್ಲಿ ೧೮ ಭರವಸೆ ಈಡೇರಿಸಿದ್ದೇನೆ. ಈ ಬಾರಿ ನಾವು ಕೊಟ್ಟಿರುವ ಭರವಸೆಗಳನ್ನೂ ಈಡೇರಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Share Post