CrimeDistricts

ಪೋಷಕರು ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು; ಯುವತಿ ಆತ್ಮಹತ್ಯೆ

ಚಿಕ್ಕಮಗಳೂರು; ಹಾಸ್ಟೆಲ್‌ನಲ್ಲಿದ್ದು ಓದುತ್ತಿದ್ದ ಡಿಗ್ರಿ ವಿದ್ಯಾರ್ಥಿನಿಗೆ ಪೋಷಕರು ಬುದ್ಧಿವಾದ ಹೇಳಿದ್ದು, ಇದರಿಂದ ಮನನೊಂದು ಆಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಬಳಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಹತ್ತೊಂಬತ್ತು ವರ್ಷದ ಸುರಕ್ಷಾ ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. 

ಸುರಕ್ಷಾ ಶೃಂಗೇರಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಳು. ಈಜೆ ಸಚ್ಚಿದಾನಂದಪುರದಲ್ಲಿ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಯರ ನಿಲಯದಲ್ಲಿದ್ದು ಕಾಲೇಜಿಗೆ ಹೋಗುತ್ತಿದ್ದಳು. ಗಣೇಶ ಹಬ್ಬಕ್ಕೆ ಮನೆಗೆ ಬಂದಿದ್ದ ಸುರಕ್ಷಾಗೆ ಪೋಷಕರು ಹಲವು ಕಾರಣಗಳಿಗಾಗಿ ಬುದ್ಧಿವಾದ ಹೇಳಿದ್ದರು.

ಇದರಿಂದ ಮನನೊಂದಿರುವ ಸುರಕ್ಷಾ ಮನೆಯಲ್ಲೇ ವಿಷ ಸೇವನೆ ಮಾಡಿದ್ದಳು. ಕೂಡಲೇ ಆಕೆಯನ್ನು ಕೊಪ್ಪ ಆಸ್ಪತ್ರೆಗೆ ಸೇರಿಸಲಾಗಿತ್ತು. ಅನಂತರ ಶಿವಮೊಗ್ಗಕ್ಕೆ ಶಿಫ್ಟ್‌ ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸುರಕ್ಷಾ ಸಾವನ್ನಪ್ಪಿದ್ದಾಳೆ.

 

Share Post