CrimeDistricts

ಅನ್ಯಕೋಮಿನ ಯುವಕನನ್ನ ಪ್ರೀತಿಸಿದ್ದೇ ತಪ್ಪಾಯ್ತು; ತಂಗಿ, ತಾಯಿಯನ್ನು ಕೊಂದ ಪಾಪಿ!

ಮೈಸೂರು; ಸಹೋದರಿ ಅನ್ಯಕೋಮಿನ ಯುವಕನನ್ನು ಪ್ರೀತಿಸಿದ್ದಾಳೆ ಎಂಬ ಕಾರಣಕ್ಕೆ ಸಹೋದರನೇ, ತಂಗಿ ಹಾಗೂ ತಾಯಿಯನ್ನು ಕೊಂದಿರುವ ದಾರುಣ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಮರೂರು ಗ್ರಾಮದ ಮಗಳು ಧನುಶ್ರೀ (19), ತಾಯಿ ಅನಿತಾ (43) ಕೊಲೆಯಾದವರು.

ಧನುಶ್ರೀ ಅನ್ಯಕೋಮಿನ ಯುವಕನೊಂದಿಗೆ ಪ್ರೀತಿ ಮಾಡುತ್ತಿದ್ದಳು. ಈ ವಿಷಯ ಸಹೋದರ ನಿತಿನ್‌ಗೆ ಗೊತ್ತಾಗಿದೆ. ಇದರಿಂದ ಆಕ್ರೋಶಗೊಂಡ ನಿತಿನ್‌ ಮನೆಯಲ್ಲಿ ಜಗಳವಾಡಿದ್ದಾನೆ. ಅನಂತರ ತಾಯಿ ಹಾಗೂ ಸಹೋದರಿಯನ್ನು ಬೈಕ್‌ನಲ್ಲಿ ಕರೆ ಬಳಿಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ತಾಯಿ ಮುಂದೆಯೇ ಸಹೋದರಿ ಧನುಶ್ರೀಯನ್ನು ಕೆರೆಗೆ ತಳ್ಳಿದ್ದಾನೆ. ಇದರಿಂದ ಗಾಬರಿಗೊಂಡು ತಾಯಿ ಅನಿತಾ ಮಗಳನ್ನು ರಕ್ಷಿಸಲು ಮುಂದಾಗಿದ್ದಾಳೆ. ಆಗ ಆರೋಪಿ ನಿತಿನ್‌ ತಾಯಿಯನ್ನೂ ಕೆರೆಗೆ ತಳ್ಳಿ ಸಾಯಿಸಿದ್ದಾನೆ.

ಈ ಬಗ್ಗೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Share Post