DistrictsPolitics

ಸಿದ್ದು, ಡಿಕೆಶಿ ಚುನಾವಣೆಗೆ ಸ್ಪರ್ಧಿಸದೆ ಪಕ್ಷ ಸಂಘಟನೆ ಮಾಡಿದರೆ ಒಳ್ಳೆಯದು; ಸಂತೋಷ್‌ ಲಾಡ್‌

ಹುಬ್ಬಳ್ಳಿ; ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ಎಲ್ಲೂ ಸ್ಪರ್ಧೆ ಮಾಡುವುದು ಬೇಡ. ಅವರು ಪಕ್ಷವನ್ನು ಬಲಪಡಿಸುವ ಕೆಲಸ ಮಾಡಲಿ ಎಂದು ಮಾಜಿ ಸಚಿವ ಸಂತೋಷ್‌ ಲಾಡ್‌ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇಬ್ಬರೂ ನಾಯಕರು ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ, ಅಲ್ಲಿಗೇ ಸೀಮಿತ ಆಗೋದು ಬೇಡ. ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಲು ಎಂದು ಹೇಳಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪಕ್ಷ ಬಲಪಡಿಸುವ ಕೆಲಸ ಮಾಡಬೇಕು. ಡಿ.ಕೆ.ಶಿವಕುಮಾರ್‌ ಅವರು ರಾಜ್ಯಾದ್ಯಂತ ಸುತ್ತಾಡಿ ಪಕ್ಷ ಬಲಪಡಿಸಬೇಕು. ಆಗ ಪಕ್ಷ ಅಧಿಕಾರಕ್ಕೆ ಬರುತ್ತದೆ. ಇಬ್ಬರೂ ನಾಯಕರು ಈ ಬಾರಿ ಚುನಾವಣೆಗೆ ನಿಲ್ಲದೆ ರಾಜ್ಯಾದ್ಯಂತ ಪ್ರವಾಸಿ ಮಾಡಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಸಂತೋಷ್‌ ಲಾಡ್‌ ಅಭಿಪ್ರಾಯ ಪಟ್ಟಿದ್ದಾರೆ.

Share Post