DistrictsPolitics

ಜಗದೀಶ್‌ ಶೆಟ್ಟರ್‌ ಸ್ಪರ್ಧೆ ಪಕ್ಕಾ; ಟಿಕೆಟ್‌ ನೀಡುತ್ತಾ ಬಿಜೆಪಿ..?

ಹುಬ್ಬಳ್ಳಿ; ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಸ್ಪರ್ಧೆ ಮಾಡೋದು ಖಚಿತವಾಗಿದೆ. ಆದ್ರೆ, ಅವರಿಗೆ ಬಿಜೆಪಿ ಟಿಕೆಟ್‌ ಸಿಗುತ್ತಾ ಎಂಬುದರ ಬಗ್ಗೆ ಇನ್ನೂ ಕುತೂಹಲ ಮುಂದವರೆದಿದೆ. ಈಗಾಗಲೇ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯವರು ಶೆಟ್ಟರ್‌ ಅವರನ್ನು ಭೇಟಿ ಮಾಡಿ ಹೋಗಿದ್ದಾರೆ. ಅನಂತರ ಬೆಂಬಲಿಗರ ಸಭೆ ನಡೆಸಿದ ಶೆಟ್ಟರ್‌ ಅವರು, ನನ್ನನ್ನು ಆರು ಬಾರಿ ಆಯ್ಕೆ ಮಾಡಿದ್ದೀರಿ, ಏಳನೇ ಬಾರಿ ಕೂಡಾ ಆಯ್ಕೆ ಮಾಡುತ್ತೀರಿ ಎಂದು ನಂಬಿದ್ದೇನೆ ಅಂತ ಹೇಳಿದರು. ಆ ಮೂಲಕ ಈ ಬಾರಿ ಸ್ಪರ್ಧೆ ಖಚಿತ ಅನ್ನೋದನ್ನು ಪರೋಕ್ಷವಾಗಿ ಹೇಳಿದ್ದಾರೆ.

ಉತ್ತಕ ಕರ್ನಾಟಕ ಭಾಗದಲ್ಲಿ ನಾನು ಬಿಜೆಪಿ ಪಕ್ಷ ಕಟ್ಟಿದ್ದೇನೆ. ಎರಡು ಪಟ್ಟಿ ಪ್ರಕಟವಾದರೂ ನನಗೆ ಟಿಕೆಟ್‌ ಘೋಷಣೆಯಾಗದಿದ್ದಕ್ಕೆ ಜನ ಕೇಳುತ್ತಿದ್ದಾರೆ. ನಾನು ಅಧಿಕಾರ ಅನುಭವಿಸಲು ರಾಜಕೀಯಕ್ಕೆ ಬಂದಿಲ್ಲ. ಇನ್ನೊಂದು ಬಾರಿ ಅವಕಾಶ ಕೊಡಿ ಎಂದು ಕೇಳಿದ್ದೇನೆ. ಟಿಕೆಟ್‌ ಕೊಡುತ್ತಾರೆ ಎಂಬ ಭರವಸೆ ಇದೆ. ಇದು ಹುಬ್ಬಳ್ಳಿ ಜನರ ಸ್ವಾಭಿಮಾನದ ಪ್ರಶ್ನೆ. ಟಿಕೆಟ್‌ ಸಿಗದೆ ಹೋದರೆ ವಿಚಾರ ಮಾಡಿ ತೀರ್ಮಾನ ಕೈಗೊಳ್ಳೋಣ ಎಂದು ಶೆಟ್ಟರ್‌ ಹೇಳಿದರು. ಬಿಜೆಪಿ ಟಿಕೆಟ್‌ಗಾಗಿ ಕಾಯುತ್ತಿರುವ ಶೆಟ್ಟರ್‌ ಒಂದು ವೇಳೆ ಟಿಕೆಟ್‌ ಸಿಗದೆ ಹೋದರೆ ಪಕ್ಷೇತರವಾಗಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Share Post