CrimeDistricts

ನಾಪತ್ತೆಯಾಗಿದ್ದ ಜೈನ ಮುನಿಯ ಭೀಕರ ಹತ್ಯೆ; ಕಾರಣ ಏನು ಗೊತ್ತಾ..?

ಬೆಳಗಾವಿ; ಮೂರು ದಿನಗಳಿಂದ ನಾಪತ್ತೆಯಾಗಿದ್ದ ಜೈನ ಮುನಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಕೊಲೆಯಾದ ಜೈನಮುನಿ. ಘಟನೆ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಜುಲೈ 6ರಂದು ಜೈನಮುನಿ ನಾಪತ್ತೆಯಾಗಿದ್ದರು. ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿತ್ತು. ಚಿಕ್ಕೋಡಿ ಪೊಲೀಸರು ಹುಡುಕಾಟ ನಡೆಸಿದ್ದರು. ಇದೇ ವೇಳೆ ಅನುಮಾನದಿಂದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಈ ವೇಳೆ ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಆದ್ರೆ ಮೃತದೇಹವನ್ನು ಎಲ್ಲಿ ಹಾಕಿದ್ದಾರೆ ಎಂಬುದರ ಬಗ್ಗೆ ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ನಿನ್ನೆಯಿಂದ ಹುಡುಕಾಡಿದರೂ ಮೃತದೇಹ ಪತ್ತೆಯಾಗಿಲ್ಲ.

ಆರೋಪಿಗಳು ಮೊದಲಿಗೆ ದೇಹವನ್ನು ಕತ್ತರಿಸಿ ಬೋರ್‌ವೆಲ್‌ಗೆ ಎಸೆದಿದ್ದಾಗಿ ಹೇಳಿದ್ದರು. ಇನ್ನೊಮ್ಮೆ ಶವವನ್ನು ನದಿಗೆ ಎಸೆದಿರುವುದಾಗಿ ಹೇಳಿದ್ದಾರೆ. ಹೀಗಾಗಿ ಗೊಂದಲದಲ್ಲೇ ಪೊಲೀಸರು ಖಟಕಬಾವಿ ಸುತ್ತಮುತ್ತ ಹುಡುಕಾಟ ನಡೆಸುತ್ತಿದ್ದಾರೆ.

Share Post