DistrictsPolitics

ಜಾರಕಿಹೊಳಿ ಟೀಂ ದುಬೈ ಪ್ರವಾಸ ವಿಚಾರ; ತಪ್ಪೇನು ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಕೊಪ್ಪಳ; ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಅವರ ಗುಂಪಿನ ಶಾಸಕರು ದುಬೈ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈ ಬಗ್ಗೆ ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಅವರು ಅಚ್ಚರಿ ರೀತಿಯಲ್ಲಿ ಉತ್ತರ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಉತ್ತರ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಕೊಪ್ಪಳದ ಹೊರವಯಲದಲ್ಲಿ ಪತ್ರಕರ್ತರೊಂದಿಗೆ ಮಾತನಾಡುವಾಗ ಪತ್ರಕರ್ತರೊಬ್ಬರು ಸತೀಶ್‌ ಜಾರಕಿಹೊಳಿ ಅಂಡ್‌ ಟೀಂ ದುಬೈಗೆ ಹೋಗುತ್ತಿರುವುದರ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿ ಸಿಎಂ ಸಿದ್ದರಾಮಯ್ಯ, ಶಾಸಕರು ತಮ್ಮ ಸ್ವಂತ ಹಣದಲ್ಲಿ ಪ್ರವಾಸ ಮಾಡಿದರೆ ಏನು ಕಷ್ಟ ಎಂದು ಪ್ರಶ್ನೆ ಮಾಡಿದ್ದಾರೆ.

ಸರ್ಕಾರದ ವತಿಯಿಂದ ನಾವು ಯಾರನ್ನೂ ಪ್ರವಾಸಕ್ಕೆ ಕಳುಹಿಸುತ್ತಿಲ್ಲ. ಶಾಸಕರು ತಮ್ಮ ಹಣದಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ ಎಂದರು. ಜೊತೆಗೆ ಜನರು ಆಶೀರ್ವಾದ ಮಾಡಿ ನಮಗೆ 136 ಸ್ಥಾನ ಕೊಟ್ಟಿದ್ದಾರೆ. ಐದು ವರ್ಷ ನಾವೇ ಅಧಿಕಾರ ಮಾಡುತ್ತೇನೆ ಎಂದೂ ಸಿಎಂ ಇದೇ ವೇಳೆ ತಿಳಿಸಿದ್ದಾರೆ.

Share Post