DistrictsPolitics

ನಾನಂದ್ರೆ ಅಂದ್ರೆ ಜೆಡಿಎಸ್‌, ಬಿಜೆಪಿಗೆ ಭಯ; ವಿಪಕ್ಷ ನಾಯಕ ಸಿದ್ದರಾಮಯ್ಯ

ಮೈಸೂರು; ಯಡಿಯೂರಪ್ಪ ಪುತ್ರ ವಿಜಯೇಂದ್ರರನ್ನು ಮಂತ್ರಿ ಮಂಡಲಕ್ಕೆ ಸೇರಿಸಿಕೊಳ್ಳಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ಮಂತ್ರಿ ಮಂಡಲವನ್ನೇ ವಿಸ್ತರಣೆ ಮಾಡಲಿಲ್ಲ. ಬಿಜೆಪಿ, ಜೆಡಿಎಸ್ ಗೆ ಸಿದ್ಧರಾಮಯ್ಯನನ್ನು ಮುಗಿಸಬೇಕು ಎಂಬುದೇ ಏಕೈಕ ಉದ್ದೇಶವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಡೆದ ಕಾಂಗ್ರೆಸ್‌ ಸಭೆಯಲ್ಲಿ ಅವರು ಮಾತನಾಡಿದರು.

ಜಿ.ಟಿ.ದೇವೇಗೌಡ ಅವಕಾಶವಾದಿ ರಾಜಕಾರಣಿ. ಆದ್ರೆ ಈ ಬಾರಿ ಅವರ ಆಟ ನಡೆಯೋದಿಲ್ಲ ಎಂದು ಹೇಳಿದರು. ಎಲ್ಲರೂ ಒಗ್ಗಟ್ಟಾಗಿ ಬಿಜೆಪಿ ಜೆಡಿಎಸ್ ಅನ್ನು ಸೋಲಿಸಬೇಕು ಎಂದು ಶಪಥ ಮಾಡಿ. ನಮ್ಮಲ್ಲಿ ಗುಂಪುಗಳಿವೆ, ಮೊದಲು ಗುಂಪುಗಾರಿಕೆ ಬಿಡಬೇಕು. ಮರೀಗೌಡ, ಸಿದ್ದೇಗೌಡ ಮುಖ ನೋಡಬಾರದು, ನನ್ನ ಮುಖ ನೋಡಿಕೊಂಡು ಕಾಂಗ್ರೆಸ್ ಗೆ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.

ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 100ಕ್ಕೆ 200ರಷ್ಟು ಅಧಿಕಾರಕ್ಕೆ ಬರಲಿದೆ. ಹೀಗಾಗಿಯೇ ಸಿದ್ದರಾಮಯ್ಯ ಅಂದ್ರೆ ಬಿಜೆಪಿ, ಜೆಡಿಎಸ್‌ ನಾಯಕರಿಗೆ ಭಯ ಶುರುವಾಗಿದೆ ಎಂದು ಹೇಳಿದರು.

Share Post