Districts

ಶಿಡ್ಲಘಟ್ಟ ನಗರಸಭೆ ಚುನಾವಣೆ:ಜೆಡಿಎಸ್‌ ಸದಸ್ಯರಿಗೆ ವಿಪ್‌ ಜಾರಿ

ಚಿಕ್ಕಬಳ್ಳಾಪುರ:  ಶಿಡ್ಲಘಟ್ಟ ನಗರಸಭೆಯಲ್ಲಿ ಇಂದು ಅವಿಶ್ವಾಸ ಮಂಡನೆ ಹಿನ್ನೆಲೆ,  ಜೆಡಿಎಸ್ ಸದಸ್ಯರಿಗೆ ಮೇಲೂರು ರವಿಕುಮಾರ್ ವಿಪ್ ಜಾರಿ ಮಾಡಿದ್ದಾರೆ.  ಆಡಳಿತರೂಡ ಜೆಡಿಎಸ್ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್‌ ಪ್ರಯತ್ನ ಮಾಡ್ತಿದೆ. ಅಧಿಕಾರಕ್ಕೇರಲು ಕಾಂಗ್ರೆಸ್‌ ರಣತಂತ್ರ ರೂಪಿಸುತ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಒಟ್ಟು 31 ಸದಸ್ಯರನ್ನು ಒಳಗೊಂಡಿದ್ದು, ಮ್ಯಾಜಿಕ್‌ ನಂಬರ್‌ 16ಗಳಿಸಲು ಮೇಲೂರು ರವಿಕುಮಾರ್ ಶಾಸಕ ವಿ ಮುನಿಯಪ್ಪ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ. ಈ ನಡುವೆ 19 ಜನ ಸದಸ್ಯರು ಅವಿಶ್ವಾಸ ಮಂಡನೆಗೆ ಒಪ್ಪಿಗೆ ಸೂಚಿಸಿರುವ ಹಿನ್ನೆಲೆ ರವಿಕುಮಾರ್‌ ವಿಪ್‌ ಜಾರಿಗೊಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರಭೆ ಸುತ್ತ 200 ಮೀ 144 ಸೆಕ್ಷನ್ ಜಾರಿ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್‌ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.

Share Post