BengaluruDistrictsPolitics

ಇಂದಿನಿಂದ ಜೆಡಿಎಸ್‌ ಪಂಚರತ್ನ ಯಾತ್ರೆ; ಚಾಮುಂಡಿಗೆ ಹೆಚ್ಡಿಕೆ ವಿಶೇಷ ಪೂಜೆ

ಬೆಂಗಳೂರು; ಇಂದಿನಿಂದ ಜೆಡಿಎಸ್‌ ಪಂಚರತ್ನ ಯಾತ್ರೆಗೆ ಚಾಲನೆ ಸಿಗಲಿದೆ. ಕೋಲಾರ ಜಿಲ್ಲೆ ಮುಳಬಾಗಿಲಿನಲ್ಲಿ ಬೃಹತ್‌ ಸಮಾರಂಭ ಏರ್ಪಡಿಸಲಾಗಿದೆ. ಈ ಸಮಾರಂಭಕ್ಕೆ ರಾಜ್ಯ ಮೂಲೆ ಮೂಲೆಗಳಿಂದ ಲಕ್ಷಾಂತರ ಜನ ಆಗಮಿಸುತ್ತಿದ್ದಾರೆ. ಇನ್ನು ಯಾತ್ರೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿಯವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್‌ ಸೇರಿದಂತೆ ಹಲವು ನಾಯಕರು ಹಾಜರಿದ್ದರು.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಹಾಗೂ ಕಾರ್ಯಕರ್ತರಲ್ಲಿ ಹುರುಪು ತುಂಬಲು ಈ ಯಾತ್ರೆ ಕೈಗೊಳ್ಳಲಾಗಿದೆ. ಜೊತೆಗೆ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಏನೆಲ್ಲಾ ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ ಎಂಬುದನ್ನು ಈ ಯಾತ್ರೆ ಮೂಲಕ ಮತದಾರರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಲಾಗುತ್ತದೆ.

Share Post