Districts

ಇಂದು ಶಿರಾದಲ್ಲಿ ಬಿಜೆಪಿ ಸಮಾವೇಶ; ಜೆಪಿ ನಡ್ಡಾ ಭಾಗಿ

ತುಮಕೂರು; ಇಂದು ಶಿರಾದಲ್ಲಿ ಬಿಜೆಪಿ ಬೃಹತ್‌ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪಾಲ್ಗೊಳ್ಳಲಿದ್ದಾರೆ. ನಿನ್ನೆಯೇ ತುಮಕೂರಿಗೆ ಆಗಮಿಸಿದ್ದ ಅವರು, ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು.

ರಾಜ್ಯ ಪ್ರವಾಸದಲ್ಲಿ ರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ನಿನ್ನೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದರು.

ಇದಕ್ಕೂ ಮುನ್ನಾ ತುಮಕೂರು-ಮದುಗಿರಿ ಉಪವಿಭಾಗದ ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮನೆ ಮನೆಗೆ ತೆರಳಿ ಬಿಜೆಪಿಯ ಅಭಿವೃದ್ದಿ ಕಾರ್ಯಗಳನ್ನ ಮಾತೆಯರಿಗೆ ತಿಳಿಸಿ ಪಕ್ಷ ಬಲಪಡಿಸುವ ಮೂಲಕ ಜಿಲ್ಲೆಯಲ್ಲಿ 11ವಿಧಾನ ಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾದಿಸುವಂತೆ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಬಳಿಕ ಸಿದ್ದಗಂಗಾ ಮಠಕ್ಕೆ ತೆರಳಿ ಸಿದ್ದಗಂಗಾ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಸಿದ್ದಲಿಂಗ ಶ್ರೀಗಳ ಆಶಿರ್ವಾದ ಪಡೆದು ಚಿತ್ರದುರ್ಗದತ್ತ ಪ್ರಯಾಣ ಬೆಳೆಸಿದರು. ಮದಾರಚೆನ್ನಯ್ಯ ಪೀಠ, ಹಾಗೂ ಸಿರಿಗೆರೆ ತರಳಬಾಳು ಮಠಕ್ಕೆ ಬೇಟಿ ನೀಡಿದರು. ಇಂದು ಹರಿಹರದ ಕನಕ ಗುರುಪೀಠ, ಪಂಚಮಸಾಲಿ ಮಠ, ವಾಲ್ಮೀಕಿ ಗುರುಪೀಠಕ್ಕೂ ಬೇಟಿ ನೀಡಲಿದ್ದಾರೆ.

 

Share Post