Districts

ರಾಯಚೂರು ಜಿಲ್ಲಾ ನ್ಯಾಯಾಧೀಶರನ್ನು ವರ್ಗಾಯಿಸಿದ ಹೈಕೋರ್ಟ್‌

ರಾಯಚೂರು: ಗಣರಾಜ್ಯೋತ್ಸ ದಿನದಂದು ಅಂಬೇಡ್ಕರ್‌ ಭಾವಚಿತ್ರ ತೆಗೆಸಿದ ಆರೋಪ ಎದುರಿಸುತ್ತಿರುವ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರನ್ನು ಹೈಕೋರ್ಟ್‌ ವರ್ಗಾವಣೆ ಮಾಡಿದೆ. ರಾಜ್ಯಾದ್ಯಂತ ಹೋರಾಟ ನಡೆದ ಹಿನ್ನೆಲೆಯಲ್ಲಿ ಹೈಕೋರ್ಟ್‌ ಈ ಆದೇಶ ಹೊರಡಿಸಿದೆ. ಸದ್ಯ ಅವರನ್ನು ಬೆಂಗಳೂರಿನಲ್ಲಿ ಒಒಡಿ ಅಧ್ಯಕ್ಷರಾಗಿ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಅಂದಹಾಗೆ, ಗಣರಾಜ್ಯೋತ್ಸವದಂದು ನ್ಯಾಯಾಧೀಶ ಮಲ್ಲಿಕಾರ್ಜುಗೌಡ ಅವರು ನಡೆದುಕೊಂಡು ರೀತಿಯನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಲೇ ಇವೆ. ಇನ್ನು ನಾಳೆ ದಲಿತ ಸಂಘಟನೆಗಳ ಒಕ್ಕೂಟದಿಂದ ವಿಧಾನಸೌಧ ಚಲೋಗೆ ಕರೆ ನೀಡಲಾಗಿದೆ. ಈ ಬೆನ್ನಲ್ಲೇ ಹೈಕೋರ್ಟ್‌ ರಾಯಚೂರು ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹೀಗಾಗಿ ನಾಳೆ ಹೋರಾಟ ಮಾಡಬೇಕೆ ಬೇಡವೇ ಎಂಬುದರ ಬಗ್ಗೆ ದಲಿತ ಸಂಘಟನೆಗಳು ಚರ್ಚಿಸಿ ತೀರ್ಮಾನ ಕೈಗೊಳ್ಳಲು ನಿರ್ಧಾರ ಮಾಡಿವೆ.

Share Post