Districts

ಮಹಾರಾಷ್ಟ್ರದ ಸಿಎಂ ವಿರುದ್ಧ ಈಶ್ವರಪ್ಪ ಗರಂ

ಶಿವಮೊಗ್ಗ: ಬೆಳಗಾವಿಯಲ್ಲಿ ಎಂಇಎಸ್‌ ಪುಂಡರ ಪುಂಡಾಟಿಕೆ ಖಂಡಿಸಿ ಸಚಿವ ಕೆ.ಎಸ್‌. ಈಶ್ವರಪ್ಪ ಗರಂ ಆಗಿದ್ದಾರೆ. ಮಹಾರಾಷ್ಟ್ರದ ಸಿಎಂ ಆಕಾಶದಿಂದ ಇಳಿದು ಬಂದಿಲ್ಲ ಎಂದಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಮೈತ್ರಿ ಸರ್ಕಾರ ಇದೆ. ರಾಜ್ಯದ ಕಾಂಗ್ರೆಸ್‌ ನಾಯಕರು ಮಹಾರಾಷ್ಟ್ರ ಸಿಎಂ ಟ್ಟೀಟ್‌ ಗೆ ಉತ್ತರ ಕೊಡಬೇಕು. ಭಾಷೆ, ಜಲ, ನೆಲ, ಮಹಾಪುರುಷರ ವಿಚಾರದಲ್ಲಿ ರಾಜಕಾರಣ ಮಾಡಬಾರದು. ಮಹಾರಾಷ್ಟ್ರದ ಸಿಎಂ ಆಕಾಶದಿಂದ ಇಳಿದು ಬಂದಿಲ್ಲ. ಅವರಿಗೆ ಪ್ರಧಾನಿ ಮೋದಿ ಸರಿಯಾದ ಉತ್ತರ ನೀಡಲಿದ್ದಾರೆ ಎಂದು ಮಹಾರಾಷ್ಟ್ರ ಸಿಎಂಗೆ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

Share Post