DistrictsPolitics

ತವರು ಜಿಲ್ಲೆಯಲ್ಲಿ ಖರ್ಗೆಗೆ ಅದ್ದೂರಿ ಸ್ವಾಗತ

ಕಲಬುರಗಿ;  ಎಐಸಿಸಿ ಅಧ್ಯಕ್ಷರಾದ ಮೇಲೆ ಮೊದಲ ಬಾರಿಗೆ ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆಗೆ ಆಗಮಿಸಿದ್ದಾರೆ. ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದ್ದಾರೆ.

ಇಂದು  ಬೆಳಗ್ಗೆ 10.40ಕ್ಕೆ ವಿಶೇಷ ವಿಮಾನದ ಮೂಲಕ ಖರ್ಗೆ  ಕಲಬುರಗಿಗೆ ಆಗಮಿಸಿದರು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು ಖರ್ಗೆ ಅವರನ್ನು ಸ್ವಾಗತಿಸಿದರು.

ನಗರೇಶ್ವರ ಶಾಲೆಯಿಂದ ಬೃಹತ್‌ ಮೆರವಣಿಗೆ ನಡೆಯಿತು. ಎನ್‌ವಿ ಮೈದಾನದಲ್ಲಿ ಅಭಿನಂದನಾ ಸಮಾರಂಭ ಹಾಗೂ ಕಲ್ಯಾಣ ಕ್ರಾಂತಿ ಸಮಾವೇಶ ನಡೆಯಿತು.  ಸಾವಿರಾರು ಜನರು ಇದರಲ್ಲಿ ಪಾಲ್ಗೊಂಡಿದ್ದರು.

ಡೊಳ್ಳು ಕುಣಿತ, ಹಲಗೆ ಕುಣಿತ, ಲಂಬಾಣಿ ನೃತ್ಯ ಸೇರಿದಂತೆ ಜಾನಪದ ಕಲಾತಂಡಗಳ ಪ್ರದರ್ಶನ ಮೆರವಣಿಗೆಯ ಮೆರುಗು ಹೆಚ್ಚಿಸಿದವು.

 

Share Post