CrimeDistricts

ಶೆಡ್‌ ಮೇಲೆ ಕುಸಿಯಿತು ಗುಡ್ಡ; ಮೂವರು ಕಾರ್ಮಿಕರ ದಾರುಣ ಸಾವು

ಮಂಗಳೂರು; ರಬ್ಬರ್‌ ತೋಟದ ಕಾರ್ಮಿಕರು ಉಳಿದುಕೊಂಡಿದ್ದ ಶೆಡ್‌ ಮೇಲೆ ಗುಡ್ಡ ಕುಸಿದು, ಮೂವರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ನಡೆದಿದೆ. ಮತ್ತೊಬ್ಬ ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆನ್ರಿ ಕಾರ್ಲೊ ಎಂಬುವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಐವರ ಪೈಕಿ ನಾಲ್ವರು ಶೆಡ್‌ನೊಳಗೆ ಸಿಲುಕಿಕೊಂಡಿದ್ದರು. ಅದರಲ್ಲಿ ಮೂವರನ್ನು ರಕ್ಷಣೆ ಮಾಡಲಾಗಿತ್ತು. ಒಬ್ಬರು ಮೃತಪಟ್ಟಿದ್ದರು. ಉಳಿದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪಾಲಕ್ಕಾಡು ನಿವಾಸಿ ಬಿಜು (44) ಬುಧವಾರ ರಾತ್ರಿ ಮೃತಪಟ್ಟವರು. ಬಾಬು (46), ಸಂತೋಷ್ ಅಲ್ಫೊನ್ಸಾ (46) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಣ್ಣೂರು ನಿವಾಸಿ ಜಾನ್ (44) ಬಂಟ್ವಾಳ ಸರ್ಕರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳ ಅಗ್ನಿಶಾಮಕ ದಳ ಹಾಗೂ ಎನ್‌‌ಡಿ.ಆರ್.ಎಫ್ ಮತ್ತು ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಚರಣೆ ನಡೆಯಿತು. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಎಸ್ಪಿ ಋಷಿಕೇಶ್ ಸೋನಾವಣೆ, ಮಂಗಳೂರು ಉಪ‌ವಿಭಾಗಾಧಿಕಾರಿ ಮದನ್ ಮೋಹನ್ ,ತಹಶೀಲ್ದಾರ್ ಸ್ಮಿತಾರಾಮು, ಪಿ.ಡಿ.ಒ.ವಿದ್ಯಾಶಿವಾನಂ ಸ್ಥಳಕ್ಕೆ ಭೇಟಿ ನೀಡಿದರು.

Share Post