DistrictsHealth

ಕಾವಾಡಿಗರಹಟ್ಟಿ ಕಲುಷಿತ ನೀರು ಸೇವನೆ ಪ್ರಕರಣ; ಸಾವಿನ ಸಂಖ್ಯೆ 6ಕ್ಕೇರಿಕೆ..!

ಚಿತ್ರದುರ್ಗ; ಕಾವಾಡಿಗರಹಟ್ಟಿ ಕಲುಷಿತ ನೀರು ಸೇವನೆಯಿಂದಾಗಿ ಇಡೀ ಗ್ರಾಮವೇ ಕಣ್ಣೀರಲ್ಲಿ ಮುಳುಗಿದೆ. ಕಲುಷಿತ ನೀರು ಸೇವಿಸಿ ಆಸ್ಪತ್ರೆ ಸೇರಿದ್ದವರು ಮೃತಪಡುತ್ತಲೇ ಇದ್ದಾರೆ. ಇದೀಗ ಗ್ರಾಮದಲ್ಲಿ ಮೃತರ ಸಂಖ್ಯೆ ಆರಕ್ಕೇರಿದೆ.

ಇಂದು ಚಿಕ್ಕಪುರ ಗ್ರಾಮದ ಕರಿಬಸಪ್ಪ(35) ಎಂಬುವವರು ಸಾವನ್ನಪ್ಪಿದ್ದಾರೆ. ಕರಿಬಸಪ್ಪ ಅವರು ಜುಲೈ 30 ಹಾಗೂ 31ರಂದು ಕಾವಾಡಿಗರಹಟ್ಟಿಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದರು. ಅನಂತರ ಆಗಸ್ಟ್‌ 1ರಂದು ಅವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ರೋಗ ಉಲ್ಬಣ ಆಗಿದ್ದರಿಂದ ಅವರನ್ನು ದಾವಣಗೆರೆಗೆ ಶಿಫ್ಟ್‌ ಮಾಡಲಾಗುತ್ತಿತ್ತು. ಈ ವೇಳೆ ಅವರು ಸಾವನ್ನಪ್ಪಿದ್ದಾರೆ.

Share Post